ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ನ್ಯಾಯಪೀಠ, ’ಠಾಣೆಗಳು ರಿಯಲ್ ಎಸ್ಟೇಟ್ ವ್ಯವಹಾರಸ್ಥರ ಕೊಡುಕೊಳ್ಳುವಿಕೆ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ. ಸಿವಿಲ್ ವ್ಯಾಜ್ಯಗಳಲ್ಲಿ ಮಧ್ಯಪ್ರವೇಶ ಮಾಡದಂತೆ ಸುಪ್ರಿಂ ಕೋರ್ಟ್ ಹಾಗೂ ಹೈಕೋರ್ಟ್ ಪದೇ ಪದೇ ನಿರ್ದೇಶನಗಳನ್ನು ನೀಡಿದ್ದರೂ, ಪೊಲೀಸರು ಮಾತ್ರ ಈ ಆದೇಶವನ್ನು ಉಲ್ಲಂಘಿಸುತ್ತಲೇ ಇದ್ದಾರೆ‘ ಎಂದು ಅಸಮಾಧಾನ ವ್ಯಕ್ತಪಡಿಸಿತು.