<p><strong>ಬಾಗಲಕೋಟೆ:</strong> ಬಾದಾಮಿಯಲ್ಲಿ ಈಚೆಗೆ ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿಯವರಿಗೆ ಸಮವಸ್ತ್ರ ಧರಿಸಿಕೊಂಡೇ ಕಾಲಿಗೆ ಬಿದ್ದು, ಆಶೀರ್ವಾದ ಪಡೆದ 6 ಮಂದಿ ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆ ಮಾಡಿದ್ದಾರೆ.</p>.<p>ಆಶೀರ್ವಾದ ರೂಪದಲ್ಲಿ ಸ್ವಾಮೀಜಿಯಿಂದ ಪೊಲೀಸರು ಹಣ ಪಡೆದ ಮತ್ತು ಸ್ವಾಮೀಜಿ ಏಕವಚನದಲ್ಲೇ ಮಾತನಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆದರೆ, ವರ್ಗಾವಣೆ ಆದೇಶ ಪತ್ರದಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.</p>.<p>‘ಸಮವಸ್ತ್ರದಲ್ಲಿದ್ದಾಗ ಕಾಲಿಗೆ ಬಿದ್ದು ನಮಸ್ಕರಿಸಬಾರದು. ಸಲ್ಯೂಟ್ ಹೊಡೆಯಿರಿ ಸಾಕು. ಆಶೀರ್ವಾದ ರೂಪದಲ್ಲಿ ನೀಡಿದ ಹಣ ಖರ್ಚು ಮಾಡಬೇಡಿ. ಜಗಲಿ ಮೇಲಿಟ್ಟು ಪೂಜೆ ಮಾಡಿ. ಒಳ್ಳೆಯದಾಗುತ್ತದೆ’ ಎಂದು ಸ್ವಾಮೀಜಿ ಹೇಳಿದ್ದು ವಿಡಿಯೊದಲ್ಲಿದೆ.</p>.<p>ಬಾದಾಮಿ ಪೊಲೀಸ್ ಠಾಣೆಯ ಎಎಸ್ಐ ಜಿ.ಬಿ. ದಳವಾಯಿ, ಎಎಸ್ಐ ಡಿ.ಜೆ. ಶಿವಪುರ, ಕಾನ್ಸ್ಟೆಬಲ್ಗಳಾದ ಎಸ್.ಪಿ. ಅಂಕೋಲೆ, ಜಿ.ಬಿ. ಅಂಗಡಿ, ರಮೇಶ ಇಳಗೇರ, ಎಂ.ಎಸ್. ಹುಲ್ಲೂರ ವರ್ಗಾವಣೆಯಾದ ಸಿಬ್ಬಂದಿ.</p>.<p>‘ಮಠಕ್ಕೆ ಬರುವ ಭಕ್ತರಿಗೆ ಹಲವು ವರ್ಷಗಳಿಂದ ₹100 ರಿಂದ ₹500ರವರೆಗೆ ನೀಡಿ ಆಶೀರ್ವಾದಿಸುತ್ತೇನೆ. ಭಕ್ತರನ್ನು ಏಕವಚನದಲ್ಲೇ ಮಾತನಾಡಿಸುತ್ತೇನೆ. ಆಶೀರ್ವಾದ ರೂಪದಲ್ಲಿ ಹಣ ನೀಡಿದ್ದೇನೆ’ ಎಂದು ಶಿವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಬಾದಾಮಿಯಲ್ಲಿ ಈಚೆಗೆ ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿಯವರಿಗೆ ಸಮವಸ್ತ್ರ ಧರಿಸಿಕೊಂಡೇ ಕಾಲಿಗೆ ಬಿದ್ದು, ಆಶೀರ್ವಾದ ಪಡೆದ 6 ಮಂದಿ ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆ ಮಾಡಿದ್ದಾರೆ.</p>.<p>ಆಶೀರ್ವಾದ ರೂಪದಲ್ಲಿ ಸ್ವಾಮೀಜಿಯಿಂದ ಪೊಲೀಸರು ಹಣ ಪಡೆದ ಮತ್ತು ಸ್ವಾಮೀಜಿ ಏಕವಚನದಲ್ಲೇ ಮಾತನಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆದರೆ, ವರ್ಗಾವಣೆ ಆದೇಶ ಪತ್ರದಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.</p>.<p>‘ಸಮವಸ್ತ್ರದಲ್ಲಿದ್ದಾಗ ಕಾಲಿಗೆ ಬಿದ್ದು ನಮಸ್ಕರಿಸಬಾರದು. ಸಲ್ಯೂಟ್ ಹೊಡೆಯಿರಿ ಸಾಕು. ಆಶೀರ್ವಾದ ರೂಪದಲ್ಲಿ ನೀಡಿದ ಹಣ ಖರ್ಚು ಮಾಡಬೇಡಿ. ಜಗಲಿ ಮೇಲಿಟ್ಟು ಪೂಜೆ ಮಾಡಿ. ಒಳ್ಳೆಯದಾಗುತ್ತದೆ’ ಎಂದು ಸ್ವಾಮೀಜಿ ಹೇಳಿದ್ದು ವಿಡಿಯೊದಲ್ಲಿದೆ.</p>.<p>ಬಾದಾಮಿ ಪೊಲೀಸ್ ಠಾಣೆಯ ಎಎಸ್ಐ ಜಿ.ಬಿ. ದಳವಾಯಿ, ಎಎಸ್ಐ ಡಿ.ಜೆ. ಶಿವಪುರ, ಕಾನ್ಸ್ಟೆಬಲ್ಗಳಾದ ಎಸ್.ಪಿ. ಅಂಕೋಲೆ, ಜಿ.ಬಿ. ಅಂಗಡಿ, ರಮೇಶ ಇಳಗೇರ, ಎಂ.ಎಸ್. ಹುಲ್ಲೂರ ವರ್ಗಾವಣೆಯಾದ ಸಿಬ್ಬಂದಿ.</p>.<p>‘ಮಠಕ್ಕೆ ಬರುವ ಭಕ್ತರಿಗೆ ಹಲವು ವರ್ಷಗಳಿಂದ ₹100 ರಿಂದ ₹500ರವರೆಗೆ ನೀಡಿ ಆಶೀರ್ವಾದಿಸುತ್ತೇನೆ. ಭಕ್ತರನ್ನು ಏಕವಚನದಲ್ಲೇ ಮಾತನಾಡಿಸುತ್ತೇನೆ. ಆಶೀರ್ವಾದ ರೂಪದಲ್ಲಿ ಹಣ ನೀಡಿದ್ದೇನೆ’ ಎಂದು ಶಿವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>