‘ಮಂಡ್ಯದಲ್ಲಿ ಇಬ್ಬರು ಮತ್ತು ಹಾಸನದಲ್ಲಿ ನಾಲ್ಕು ಜನ ಕಾರ್ಯಕರ್ತರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಈ ರೀತಿ ವಶಕ್ಕೆ ತೆಗೆದುಕೊಂಡವರನ್ನು 10,12,15 ಗಂಟೆಗಳ ಕಾಲ ವಿಚಾರಣೆ ನಡೆಸಿ ಬಿಡುತ್ತಿದ್ದಾರೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ, ಲಂಚಗುಳಿತನವನ್ನು ಪ್ರಶ್ನಿಸುವ ಮತ್ತು ಟೀಕಿಸುವ ಅಭಿವ್ಯಕ್ತಿ ಹಕ್ಕು ಎಲ್ಲರಿಗೂ ಇದೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಮ್ಮ ಕಾರ್ಯಕರ್ತರ ಮನೆಗೆ ಹೋಗಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ’ ಎಂದರು.