<p><strong>ಬೆಂಗಳೂರು</strong>: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸ ‘ಕಾವೇರಿ’ ಮಂಗಳವಾರ ಬೆಳಗ್ಗಿನಿಂದಲೇ ಚಟುವಟಿಕೆಯ ಕೇಂದ್ರವಾಗಿತ್ತು. ಮಾಜಿ ಸಚಿವರು, ಶಾಸಕರು ಮತ್ತು ಸ್ವಾಮೀಜಿಗಳು ಬಂದು ಯಡಿಯೂರಪ್ಪ ಜತೆ ಮಾತುಕತೆ ನಡೆಸಿದರು.</p>.<p>ಹಿರಿಯ ಶಾಸಕರಾದ ಆರ್.ಅಶೋಕ, ಮುರುಗೇಶ ನಿರಾಣಿ, ಬಸವರಾಜ ಬೊಮ್ಮಾಯಿ, ಎಂ.ಪಿ.ರೇಣುಕಾಚಾರ್ಯ ಮುಂತಾದವರು ಭೇಟಿ ಮಾಡಿದವರಲ್ಲಿ ಪ್ರಮುಖರು.</p>.<p>ಮುರುಗೇಶ್ ನಿರಾಣಿ ಸುಮಾರು ಒಂದು ತಾಸು ಮಾತುಕತೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಆದರೆ ಯಡಿಯೂರಪ್ಪ ಅವರ ಆಪ್ತ ಮೂಲಗಳ ಪ್ರಕಾರ, ನಿರಾಣಿ ಒಂದು ತಾಸು ಇದ್ದದ್ದು ನಿಜ. ಅವರು ಎಲ್ಲರ ಜತೆಗೆ ಸೇರಿಯೇ ಮಾತುಕತೆ ನಡೆಸಿದರು. ಆ ವೇಳೆ ಇತರ ಶಾಸಕರೂ ಇದ್ದರು. ಪ್ರತ್ಯೇಕ ಮಾತುಕತೆ ನಡೆದಿಲ್ಲ.</p>.<p>ಯಡಿಯೂರಪ್ಪ ಅವರ ಜತೆ ಮಾತುಕತೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ನಿರಾಣಿ, ಹೊಸ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ನನ್ನ ಹೆಸರನ್ನು ಚಾಲ್ತಿಗೆ ಬಿಟ್ಟಿರುವುದು ಮಾಧ್ಯಮಗಳು. ಮುಖ್ಯಮಂತ್ರಿ ಹುದ್ದೆಗಾಗಿ ಯಾವುದೇ ಪ್ರಯತ್ನ ನಡೆಸಿಲ್ಲ ಎಂದು ಹೇಳಿದರು.</p>.<p>ಪಕ್ಷದ ಕೆಲವರು ಅಭಿಮಾನದಿಂದ ಮುಖ್ಯಮಂತ್ರಿ ಆಗಬಹುದು ಎನ್ನುತ್ತಾರೆ. ಇನ್ನು ಕೆಲವರು ಆಗಬಾರದು ಎನ್ನುತ್ತಾರೆ. ಇದ್ಯಾವುದಕ್ಕೂ ಹೆಚ್ಚಿನ ಮಹತ್ವವಿಲ್ಲ. ಮುಂದಿನ ಮಂತ್ರಿ ಮಂಡಲದಲ್ಲಿ ಸಚಿವರನ್ನಾಗಿ ಸೇರಿಸಿಕೊಳ್ಳದಿದ್ದರೂ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ನಿರಾಣಿ ಹೇಳಿದರು.</p>.<p>ಪಕ್ಷದ ಶಾಸಕರಲ್ಲಿ ಯಾರನ್ನೇ ಮುಖ್ಯಮಂತ್ರಿ ಮಾಡಿದರೂ ಸಹಕಾರ ನೀಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಪೂರ್ಣ ಬಹುಮತ ತರಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದರು.</p>.<p>ಮುಂದಿನ ಮುಖ್ಯಮಂತ್ರಿ ಉತ್ತರ ಕರ್ನಾಟಕದ ಲಿಂಗಾಯತರೇ ಆಗಬೇಕು ಎಂದು ಶಾಸಕ ಉಮೇಶ ಕತ್ತಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ನಿರಾಣಿ, ಅವರ ಹೇಳಿಕೆಯಲ್ಲಿ ತಪ್ಪಿಲ್ಲ. ಆದರೆ ವರಿಷ್ಠರ ತೀರ್ಮಾನವೇ ಅಂತಿಮ. ಅದಕ್ಕೆ ಎಲ್ಲರೂ ತಲೆಬಾಗಬೇಕು ಎಂದರು.</p>.<p><strong>ಆರಾಮವಾಗಿ ಕಳೆದ ಬಿಎಸ್ವೈ:</strong>ಯಡಿಯೂರಪ್ಪ ಅವರು ಬೆಳಗ್ಗಿನಿಂದ ಉಲ್ಲಾಸಿತರಾಗಿಯೇ ಇದ್ದರು. ಎಂದಿನಂತೆ ಹಲವು ಸುತ್ತು ವಾಕಿಂಗ್ ಮಾಡಿದರು. ತಮ್ಮನ್ನು ಭೇಟಿ ಮಾಡಲು ಬಂದ ಎಲ್ಲರ ಜತೆಗೂ ಮುಕ್ತವಾಗಿ ಮಾತನಾಡಿದರು. ಮನೆಯ ಹಸುಗಳನ್ನು ಪ್ರೀತಿಯಿಂದ ನೇವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸ ‘ಕಾವೇರಿ’ ಮಂಗಳವಾರ ಬೆಳಗ್ಗಿನಿಂದಲೇ ಚಟುವಟಿಕೆಯ ಕೇಂದ್ರವಾಗಿತ್ತು. ಮಾಜಿ ಸಚಿವರು, ಶಾಸಕರು ಮತ್ತು ಸ್ವಾಮೀಜಿಗಳು ಬಂದು ಯಡಿಯೂರಪ್ಪ ಜತೆ ಮಾತುಕತೆ ನಡೆಸಿದರು.</p>.<p>ಹಿರಿಯ ಶಾಸಕರಾದ ಆರ್.ಅಶೋಕ, ಮುರುಗೇಶ ನಿರಾಣಿ, ಬಸವರಾಜ ಬೊಮ್ಮಾಯಿ, ಎಂ.ಪಿ.ರೇಣುಕಾಚಾರ್ಯ ಮುಂತಾದವರು ಭೇಟಿ ಮಾಡಿದವರಲ್ಲಿ ಪ್ರಮುಖರು.</p>.<p>ಮುರುಗೇಶ್ ನಿರಾಣಿ ಸುಮಾರು ಒಂದು ತಾಸು ಮಾತುಕತೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಆದರೆ ಯಡಿಯೂರಪ್ಪ ಅವರ ಆಪ್ತ ಮೂಲಗಳ ಪ್ರಕಾರ, ನಿರಾಣಿ ಒಂದು ತಾಸು ಇದ್ದದ್ದು ನಿಜ. ಅವರು ಎಲ್ಲರ ಜತೆಗೆ ಸೇರಿಯೇ ಮಾತುಕತೆ ನಡೆಸಿದರು. ಆ ವೇಳೆ ಇತರ ಶಾಸಕರೂ ಇದ್ದರು. ಪ್ರತ್ಯೇಕ ಮಾತುಕತೆ ನಡೆದಿಲ್ಲ.</p>.<p>ಯಡಿಯೂರಪ್ಪ ಅವರ ಜತೆ ಮಾತುಕತೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ನಿರಾಣಿ, ಹೊಸ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ನನ್ನ ಹೆಸರನ್ನು ಚಾಲ್ತಿಗೆ ಬಿಟ್ಟಿರುವುದು ಮಾಧ್ಯಮಗಳು. ಮುಖ್ಯಮಂತ್ರಿ ಹುದ್ದೆಗಾಗಿ ಯಾವುದೇ ಪ್ರಯತ್ನ ನಡೆಸಿಲ್ಲ ಎಂದು ಹೇಳಿದರು.</p>.<p>ಪಕ್ಷದ ಕೆಲವರು ಅಭಿಮಾನದಿಂದ ಮುಖ್ಯಮಂತ್ರಿ ಆಗಬಹುದು ಎನ್ನುತ್ತಾರೆ. ಇನ್ನು ಕೆಲವರು ಆಗಬಾರದು ಎನ್ನುತ್ತಾರೆ. ಇದ್ಯಾವುದಕ್ಕೂ ಹೆಚ್ಚಿನ ಮಹತ್ವವಿಲ್ಲ. ಮುಂದಿನ ಮಂತ್ರಿ ಮಂಡಲದಲ್ಲಿ ಸಚಿವರನ್ನಾಗಿ ಸೇರಿಸಿಕೊಳ್ಳದಿದ್ದರೂ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ನಿರಾಣಿ ಹೇಳಿದರು.</p>.<p>ಪಕ್ಷದ ಶಾಸಕರಲ್ಲಿ ಯಾರನ್ನೇ ಮುಖ್ಯಮಂತ್ರಿ ಮಾಡಿದರೂ ಸಹಕಾರ ನೀಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಪೂರ್ಣ ಬಹುಮತ ತರಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದರು.</p>.<p>ಮುಂದಿನ ಮುಖ್ಯಮಂತ್ರಿ ಉತ್ತರ ಕರ್ನಾಟಕದ ಲಿಂಗಾಯತರೇ ಆಗಬೇಕು ಎಂದು ಶಾಸಕ ಉಮೇಶ ಕತ್ತಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ನಿರಾಣಿ, ಅವರ ಹೇಳಿಕೆಯಲ್ಲಿ ತಪ್ಪಿಲ್ಲ. ಆದರೆ ವರಿಷ್ಠರ ತೀರ್ಮಾನವೇ ಅಂತಿಮ. ಅದಕ್ಕೆ ಎಲ್ಲರೂ ತಲೆಬಾಗಬೇಕು ಎಂದರು.</p>.<p><strong>ಆರಾಮವಾಗಿ ಕಳೆದ ಬಿಎಸ್ವೈ:</strong>ಯಡಿಯೂರಪ್ಪ ಅವರು ಬೆಳಗ್ಗಿನಿಂದ ಉಲ್ಲಾಸಿತರಾಗಿಯೇ ಇದ್ದರು. ಎಂದಿನಂತೆ ಹಲವು ಸುತ್ತು ವಾಕಿಂಗ್ ಮಾಡಿದರು. ತಮ್ಮನ್ನು ಭೇಟಿ ಮಾಡಲು ಬಂದ ಎಲ್ಲರ ಜತೆಗೂ ಮುಕ್ತವಾಗಿ ಮಾತನಾಡಿದರು. ಮನೆಯ ಹಸುಗಳನ್ನು ಪ್ರೀತಿಯಿಂದ ನೇವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>