<p><strong>ಶ್ರೀರಂಗಪಟ್ಟಣ</strong>: ಸೂರ್ಯನು ಬ್ರಹ್ಮ ಸ್ಥಾನದಿಂದ ಶಿವನ ಸ್ಥಾನಕ್ಕೆ ಅಲ್ಲಿಂದ ವಿಷ್ಣು ಸ್ಥಾನಕ್ಕೆ ಪ್ರವೇಶ ಮಾಡುವುದರಿಂದ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗುವ ಸಂಭವ ಇದೆ ಎಂದು ಚಂದ್ರವನ ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದರು.</p><p> ಇಲ್ಲಿಗೆ ಸಮೀಪದ ಚಂದ್ರವನ ಆಶ್ರಮದಲ್ಲಿ ಮಕರ ಸಂಕ್ರಾಂತಿಯಂದು ಗುರುವಾರ ಸೂರ್ಯನು ಕಾಶಿ ಚಂದ್ರಮೌಳೇಶ್ವರ ಶಿವಲಿಂಗವನ್ನು ಸ್ಪರ್ಶಿಸಿದ ಘಳಿಗೆಯಲ್ಲಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p><p> ರಾಜ್ಯ ಮತ್ತು ಇತರ ಕಡೆಯೂ ರಾಜಕೀಯ ಸ್ಥಿತ್ಯಂತರ ಆಗುವ ಸಾಧ್ಯತೆ ಇದೆ. ಹಾಲಿನಂತಹ ಮನಸ್ಸು ಒಡೆದಿದರೆ ಸರಿ ಹೋಗುವುದು ಕಷ್ಟ. ಶೀತಲ ಸಮರ ಮುಂದುವರೆಯಲಿದೆ ಎಂದು ಹೇಳಿದರು.</p><p> ಜಗತ್ತಿನಲ್ಲಿ ಈ ಬಾರಿಯೂ ಅತಿವೃಷ್ಟಿ ಉಂಟಾಗಲಿದೆ. ಯುದ್ದಗಳು ನಡೆಯಲಿವೆ. ಭಯೋತ್ಪಾದಕ ಕೃತ್ಯಗಳು ಘಟಿಸಲಿವೆ. ಆದರೆ ಅಷ್ಟಾಗಿ ವಿನಾಶ ಉಂಟಾಗುವುದಿಲ್ಲ. ಕಳೆದ ವರ್ಷ ನಾನು ಹೇಳಿದ್ದ ಭವಿಷ್ಯ ನಿಜವಾಗಿದೆ ಎಂದರು.ಗೋಪೂಜೆ ನೆರವೇರಿಸಿ ಭಕ್ತರಿಗೆ ಎಳ್ಳು ಬೆಲ್ಲ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ಸೂರ್ಯನು ಬ್ರಹ್ಮ ಸ್ಥಾನದಿಂದ ಶಿವನ ಸ್ಥಾನಕ್ಕೆ ಅಲ್ಲಿಂದ ವಿಷ್ಣು ಸ್ಥಾನಕ್ಕೆ ಪ್ರವೇಶ ಮಾಡುವುದರಿಂದ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗುವ ಸಂಭವ ಇದೆ ಎಂದು ಚಂದ್ರವನ ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದರು.</p><p> ಇಲ್ಲಿಗೆ ಸಮೀಪದ ಚಂದ್ರವನ ಆಶ್ರಮದಲ್ಲಿ ಮಕರ ಸಂಕ್ರಾಂತಿಯಂದು ಗುರುವಾರ ಸೂರ್ಯನು ಕಾಶಿ ಚಂದ್ರಮೌಳೇಶ್ವರ ಶಿವಲಿಂಗವನ್ನು ಸ್ಪರ್ಶಿಸಿದ ಘಳಿಗೆಯಲ್ಲಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p><p> ರಾಜ್ಯ ಮತ್ತು ಇತರ ಕಡೆಯೂ ರಾಜಕೀಯ ಸ್ಥಿತ್ಯಂತರ ಆಗುವ ಸಾಧ್ಯತೆ ಇದೆ. ಹಾಲಿನಂತಹ ಮನಸ್ಸು ಒಡೆದಿದರೆ ಸರಿ ಹೋಗುವುದು ಕಷ್ಟ. ಶೀತಲ ಸಮರ ಮುಂದುವರೆಯಲಿದೆ ಎಂದು ಹೇಳಿದರು.</p><p> ಜಗತ್ತಿನಲ್ಲಿ ಈ ಬಾರಿಯೂ ಅತಿವೃಷ್ಟಿ ಉಂಟಾಗಲಿದೆ. ಯುದ್ದಗಳು ನಡೆಯಲಿವೆ. ಭಯೋತ್ಪಾದಕ ಕೃತ್ಯಗಳು ಘಟಿಸಲಿವೆ. ಆದರೆ ಅಷ್ಟಾಗಿ ವಿನಾಶ ಉಂಟಾಗುವುದಿಲ್ಲ. ಕಳೆದ ವರ್ಷ ನಾನು ಹೇಳಿದ್ದ ಭವಿಷ್ಯ ನಿಜವಾಗಿದೆ ಎಂದರು.ಗೋಪೂಜೆ ನೆರವೇರಿಸಿ ಭಕ್ತರಿಗೆ ಎಳ್ಳು ಬೆಲ್ಲ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>