ಸಚಿವರೇ ನದಿ ದಂಡೆಯಲ್ಲಿ ಬೀಡು ಬಿಟ್ಟಿದ್ದರಿಂದ ಇಡೀ ಜಿಲ್ಲಾಡಳಿತವೇ ಸ್ಥಳಕ್ಕೆ ದೌಡಾಯಿಸಿತ್ತು. ಜಿಲ್ಲಾಧಿಕಾರಿ ಪವನ ಕುಮಾರ್ ಮಾಲಪಾಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ್, ಎಸ್.ಪಿ ರಂಜಿತ್ ಕುಮಾರ್ ಬಂಡಾರು, ತಹಶೀಲ್ದಾರ್ ವಿಶ್ವನಾಥ್ ಸೇರಿದಂತೆ ಎಲ್ಲ ಅಧಿಕಾರಿಗಳು ಸಚಿವರ ಜತೆಯಲ್ಲೇ ಇದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ನಾಗೇಂದ್ರ ಮಧ್ಯರಾತ್ರಿಯೇ ಬೆಂಬಲಿಗರೊಂದಿಗೆ ಸ್ಥಳಕ್ಕೆ ಧಾವಿಸಿದರು. ‘ಕ್ಯಾಂಪ್ ಫೈರ್’ ಹಾಕಿಕೊಂಡು ಬೆಂಕಿ ಕಾಯಿಸುತ್ತಾ ಕುಳಿತಿದ್ದರು.