<p><strong>ನವದೆಹಲಿ:</strong> ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿಗೆ ಎಲ್ಲರೂ ತಲೆ ಬಾಗಬೇಕು ಎಂದು ರಾಜ್ಯಸಭೆ ಸದಸ್ಯ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಲಹೆ ನೀಡಿದರು.</p>.<p>ಮಂಗಳವಾರ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ‘ಹಿಜಾಬ್ ಪ್ರಕರಣದಲ್ಲಿ ರಾಜಕೀಯ ಲಾಭ–ನಷ್ಟದ ಬಗ್ಗೆ ಯೋಚಿಸದೆ, ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶಿಕ್ಷಣದ ಕುರಿತು ಚಿಂತಿಸಬೇಕು’ ಎಂದರು.</p>.<p>ಹಿಜಾಬ್ ವಿಷಯದಲ್ಲಿ ವೈಯಕ್ತಿಕ ಅಭಿಪ್ರಾಯಕ್ಕಿಂತ ಹೈಕೋರ್ಟ್ ತೀರ್ಪನ್ನು ಒಪ್ಪುವುದೇ ಸೂಕ್ತ. ಈ ಸಂಬಂಧ ಸಮುದಾಯಗಳ ಹೋರಾಟ ನಿಲ್ಲಬೇಕು ಎಂದು ಅವರು ಕಿವಿಮಾತು ಹೇಳಿದರು.</p>.<p>ಹಿಜಾಬ್ ಪ್ರಕರಣವನ್ನು ವಿವಾದವಾಗಲು ಬಿಟ್ಟಿರುವುದು ರಾಜ್ಯ ಸರ್ಕಾರದ ವೈಫಲ್ಯ ಎತ್ತಿತೋರುತ್ತದೆ ಎಂದು ಆರೋಪಿಸಿದ ಅವರು, ಎಸ್ಡಿಪಿಐ ಸಂಘಟನೆಯನ್ನು ನಿಷೇಧಿಸಬೇಕು ಎಂಬ ಕೂಗು ಅನೇಕ ವರ್ಷಗಳಿಂದ ಕೇಳಿಬರುತ್ತಿದೆ. ಆದರೆ, ರಾಷ್ಟ್ರಮಟ್ಟದ ಆ ಸಂಘಟನೆಯನ್ನು ನಿಷೇಧಿಸುವುದು ಸುಲಭವಲ್ಲ ಎಂದರು.</p>.<p><strong>ತೀರ್ಪು ಸ್ವಾಗತಾರ್ಹ; ಕೇಂದ್ರ ಸಚಿವರು:</strong>ಕೇಂದ್ರದ ಸಚಿವರು ಹಾಗೂ ಮಾಜಿ ಸಚಿವರು ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಪ್ರತಿಯೊಬ್ಬರೂ ತೀರ್ಪನ್ನು ಸ್ವಾಗತಿಸುವ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡಬೇಕಿದೆ. ವಿದ್ಯಾರ್ಥಿಗಳೂ ಶಿಕ್ಷಣಕ್ಕೆ ಆದ್ಯತೆ ನೀಡಲು ಗಮನಹರಿಸಬೇಕಿದೆ ಎಂದು ಸಲಹೆ ನೀಡಿದ್ದಾರೆ.</p>.<p>ಹಿಜಾಬ್ ಧರಿಸುವಂತೆ ಬಡ ಮುಸ್ಲಿಂ ಮಹಿಳೆಯರನ್ನೇ ಪ್ರೇರೇಪಿಸಿ, ಶೋಷಿಸಲಾಗುತ್ತಿದೆ ಎಂದು ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ದೂರಿದ್ದಾರೆ.</p>.<p>ಹಿಜಾಬ್ ಪ್ರಕರಣ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರತಿಯೊಬ್ಬರೂ ಸ್ವಾಗತಿಸಬೇಕು. ಶ್ರೀಮಂತ ಮುಸ್ಲಿಮರು ತಮ್ಮ ಮನೆಯ ಮಹಿಳೆಯರನ್ನು ಯಾವುದೇ ರೀತಿಯ ಕಟ್ಟುಪಾಡುಗಳಿಗೆ ಒಳಪಡಿಸದೇ, ಬಡವರನ್ನು ಪ್ರಚೋದಿಸುತ್ತಿದ್ದಾರೆ. ಇದರಿಂದ ಬಡ ಮಹಿಳೆಯರು ಹಿಂದುಳಿಯುವಂತಾಗಿದೆ ಎಂದಿದ್ದಾರೆ.</p>.<p>ಎಲ್.ಕೆ.ಜಿ, ಯು.ಕೆ.ಜಿ ಹಂತದ ಚಿಕ್ಕ ಹೆಣ್ಣು ಮಕ್ಕಳನ್ನೂ ಬಿಡದೇ, ಧರ್ಮದ ಹೆಸರಲ್ಲಿ ಅವರ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ. ಪಟ್ಟಭದ್ರ ಹಿತಾಸಕ್ತಿಗಳು ಬಿತ್ತಿದ ದ್ವೇಷಕ್ಕೆ ಶಿವಮೊಗ್ಗದಲ್ಲಿ ಹರ್ಷ ಎಂಬ ಯುವಕನ ಕೊಲೆ ನಡೆದಿದೆ. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ವಹಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<p>ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ, ಜನತೆ ಶಾಂತಿ ಕಾಪಾಡುವ ಮೂಲಕ ಸೌಹಾರ್ದದಿಂದ ಇರುವಂತೆ ಮನವಿ ಮಾಡಿದ್ದಾರೆ.</p>.<p>ಹಿಜಾಬ್ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಆರು ಜನ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಎಲ್ಲರೂ ತೀರ್ಪನ್ನು ಗೌರವಿಸಬೇಕು ಎಂದು ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಕೋರಿದ್ದಾರೆ.</p>.<p>ಧಾರ್ಮಿಕ ವಿಷಯಗಳ ಕುರಿತ ಗೊಂದಲವನ್ನು ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳು ದುರುಪಯೋಗ ಪಡಿಸಿಕೊಂಡಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>ಹೈಕೋರ್ಟ್ ಶ್ಲಾಘನೀಯ ತೀರ್ಪನ್ನು ನೀಡಿದ್ದಾಗಿ ಹೇಳಿರುವ ಬಿಜೆಪಿ ಮುಖಂಡ, ಕೇಂದ್ರದ ಕಾನೂನು ಖಾತೆಯ ಮಾಜಿ ಸಚಿವ ರವಿಶಂಕರ ಪ್ರಸಾದ್, ಹಿಜಾಬ್ ಧರಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕು ಎಂಬ ವಾದಕ್ಕೆ ಸೋಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿಗೆ ಎಲ್ಲರೂ ತಲೆ ಬಾಗಬೇಕು ಎಂದು ರಾಜ್ಯಸಭೆ ಸದಸ್ಯ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಲಹೆ ನೀಡಿದರು.</p>.<p>ಮಂಗಳವಾರ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ‘ಹಿಜಾಬ್ ಪ್ರಕರಣದಲ್ಲಿ ರಾಜಕೀಯ ಲಾಭ–ನಷ್ಟದ ಬಗ್ಗೆ ಯೋಚಿಸದೆ, ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶಿಕ್ಷಣದ ಕುರಿತು ಚಿಂತಿಸಬೇಕು’ ಎಂದರು.</p>.<p>ಹಿಜಾಬ್ ವಿಷಯದಲ್ಲಿ ವೈಯಕ್ತಿಕ ಅಭಿಪ್ರಾಯಕ್ಕಿಂತ ಹೈಕೋರ್ಟ್ ತೀರ್ಪನ್ನು ಒಪ್ಪುವುದೇ ಸೂಕ್ತ. ಈ ಸಂಬಂಧ ಸಮುದಾಯಗಳ ಹೋರಾಟ ನಿಲ್ಲಬೇಕು ಎಂದು ಅವರು ಕಿವಿಮಾತು ಹೇಳಿದರು.</p>.<p>ಹಿಜಾಬ್ ಪ್ರಕರಣವನ್ನು ವಿವಾದವಾಗಲು ಬಿಟ್ಟಿರುವುದು ರಾಜ್ಯ ಸರ್ಕಾರದ ವೈಫಲ್ಯ ಎತ್ತಿತೋರುತ್ತದೆ ಎಂದು ಆರೋಪಿಸಿದ ಅವರು, ಎಸ್ಡಿಪಿಐ ಸಂಘಟನೆಯನ್ನು ನಿಷೇಧಿಸಬೇಕು ಎಂಬ ಕೂಗು ಅನೇಕ ವರ್ಷಗಳಿಂದ ಕೇಳಿಬರುತ್ತಿದೆ. ಆದರೆ, ರಾಷ್ಟ್ರಮಟ್ಟದ ಆ ಸಂಘಟನೆಯನ್ನು ನಿಷೇಧಿಸುವುದು ಸುಲಭವಲ್ಲ ಎಂದರು.</p>.<p><strong>ತೀರ್ಪು ಸ್ವಾಗತಾರ್ಹ; ಕೇಂದ್ರ ಸಚಿವರು:</strong>ಕೇಂದ್ರದ ಸಚಿವರು ಹಾಗೂ ಮಾಜಿ ಸಚಿವರು ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಪ್ರತಿಯೊಬ್ಬರೂ ತೀರ್ಪನ್ನು ಸ್ವಾಗತಿಸುವ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡಬೇಕಿದೆ. ವಿದ್ಯಾರ್ಥಿಗಳೂ ಶಿಕ್ಷಣಕ್ಕೆ ಆದ್ಯತೆ ನೀಡಲು ಗಮನಹರಿಸಬೇಕಿದೆ ಎಂದು ಸಲಹೆ ನೀಡಿದ್ದಾರೆ.</p>.<p>ಹಿಜಾಬ್ ಧರಿಸುವಂತೆ ಬಡ ಮುಸ್ಲಿಂ ಮಹಿಳೆಯರನ್ನೇ ಪ್ರೇರೇಪಿಸಿ, ಶೋಷಿಸಲಾಗುತ್ತಿದೆ ಎಂದು ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ದೂರಿದ್ದಾರೆ.</p>.<p>ಹಿಜಾಬ್ ಪ್ರಕರಣ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರತಿಯೊಬ್ಬರೂ ಸ್ವಾಗತಿಸಬೇಕು. ಶ್ರೀಮಂತ ಮುಸ್ಲಿಮರು ತಮ್ಮ ಮನೆಯ ಮಹಿಳೆಯರನ್ನು ಯಾವುದೇ ರೀತಿಯ ಕಟ್ಟುಪಾಡುಗಳಿಗೆ ಒಳಪಡಿಸದೇ, ಬಡವರನ್ನು ಪ್ರಚೋದಿಸುತ್ತಿದ್ದಾರೆ. ಇದರಿಂದ ಬಡ ಮಹಿಳೆಯರು ಹಿಂದುಳಿಯುವಂತಾಗಿದೆ ಎಂದಿದ್ದಾರೆ.</p>.<p>ಎಲ್.ಕೆ.ಜಿ, ಯು.ಕೆ.ಜಿ ಹಂತದ ಚಿಕ್ಕ ಹೆಣ್ಣು ಮಕ್ಕಳನ್ನೂ ಬಿಡದೇ, ಧರ್ಮದ ಹೆಸರಲ್ಲಿ ಅವರ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ. ಪಟ್ಟಭದ್ರ ಹಿತಾಸಕ್ತಿಗಳು ಬಿತ್ತಿದ ದ್ವೇಷಕ್ಕೆ ಶಿವಮೊಗ್ಗದಲ್ಲಿ ಹರ್ಷ ಎಂಬ ಯುವಕನ ಕೊಲೆ ನಡೆದಿದೆ. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ವಹಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<p>ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ, ಜನತೆ ಶಾಂತಿ ಕಾಪಾಡುವ ಮೂಲಕ ಸೌಹಾರ್ದದಿಂದ ಇರುವಂತೆ ಮನವಿ ಮಾಡಿದ್ದಾರೆ.</p>.<p>ಹಿಜಾಬ್ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಆರು ಜನ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಎಲ್ಲರೂ ತೀರ್ಪನ್ನು ಗೌರವಿಸಬೇಕು ಎಂದು ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಕೋರಿದ್ದಾರೆ.</p>.<p>ಧಾರ್ಮಿಕ ವಿಷಯಗಳ ಕುರಿತ ಗೊಂದಲವನ್ನು ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳು ದುರುಪಯೋಗ ಪಡಿಸಿಕೊಂಡಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>ಹೈಕೋರ್ಟ್ ಶ್ಲಾಘನೀಯ ತೀರ್ಪನ್ನು ನೀಡಿದ್ದಾಗಿ ಹೇಳಿರುವ ಬಿಜೆಪಿ ಮುಖಂಡ, ಕೇಂದ್ರದ ಕಾನೂನು ಖಾತೆಯ ಮಾಜಿ ಸಚಿವ ರವಿಶಂಕರ ಪ್ರಸಾದ್, ಹಿಜಾಬ್ ಧರಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕು ಎಂಬ ವಾದಕ್ಕೆ ಸೋಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>