<p class="Briefhead"><strong>ಮಸ್ಕಿ (ರಾಯಚೂರು ಜಿಲ್ಲೆ):</strong> ‘ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರವಾದ ಬಳಿಕ ನನ್ನ ಮುಂದಿನ ನಡೆಯ ಬಗ್ಗೆ ಹೇಳುತ್ತೇನೆ. ಮುಂಬೈನಿಂದ ಎರಡು ದಿನಗಳಲ್ಲಿ ಬೆಂಗಳೂರಿಗೆ ಬರುತ್ತೇವೆ’ ಎಂದುಶಾಸಕ ಪ್ರತಾಪಗೌಡ ಪಾಟೀಲ ಬುಧವಾರ ಹೇಳಿದರು.</p>.<p class="Briefhead">ದೂರವಾಣಿ ಮೂಲಕ ‘ಪ್ರಜಾವಾಣಿ’ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ‘ದೋಸ್ತಿ ಸರ್ಕಾರ ಬೀಳಿಸಲಿಕ್ಕಾಗಿ ನಾವೆಲ್ಲ ರಾಜೀನಾಮೆ ನೀಡಿದ್ದೇವೆ. ಆದರೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು ಎನ್ನುವ ಉದ್ದೇಶ ನಮ್ಮ ರಾಜೀನಾಮೆ ಹಿಂದೆ ಇರಲಿಲ್ಲ. ಈಗ ಸರ್ಕಾರ ಪತನವಾಗಿದ್ದು, ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿದ್ದಾರೆ’ ಎಂದು ಹೇಳಿಕೊಂಡರು.</p>.<p class="Briefhead">‘ಕಾಂಗ್ರೆಸ್ನಲ್ಲಿ ಗೌರವ ಸಿಗದ ಕಾರಣ ನಾವೆಲ್ಲ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಇಲ್ಲಿ ನಮ್ಮ ಕ್ಷೇತ್ರಕ್ಕೆ ಅನುದಾನದ ಪ್ರಶ್ನೆ ಉದ್ಭವಿಸುವುದಿಲ್ಲ. ಸರ್ಕಾರದಿಂದ ನಮಗೆ ಅನ್ಯಾಯವೂ ಆಗಿಲ್ಲ’ ಎಂದು ಅವರು ದ್ವಂದ್ವ ಹೇಳಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead"><strong>ಮಸ್ಕಿ (ರಾಯಚೂರು ಜಿಲ್ಲೆ):</strong> ‘ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರವಾದ ಬಳಿಕ ನನ್ನ ಮುಂದಿನ ನಡೆಯ ಬಗ್ಗೆ ಹೇಳುತ್ತೇನೆ. ಮುಂಬೈನಿಂದ ಎರಡು ದಿನಗಳಲ್ಲಿ ಬೆಂಗಳೂರಿಗೆ ಬರುತ್ತೇವೆ’ ಎಂದುಶಾಸಕ ಪ್ರತಾಪಗೌಡ ಪಾಟೀಲ ಬುಧವಾರ ಹೇಳಿದರು.</p>.<p class="Briefhead">ದೂರವಾಣಿ ಮೂಲಕ ‘ಪ್ರಜಾವಾಣಿ’ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ‘ದೋಸ್ತಿ ಸರ್ಕಾರ ಬೀಳಿಸಲಿಕ್ಕಾಗಿ ನಾವೆಲ್ಲ ರಾಜೀನಾಮೆ ನೀಡಿದ್ದೇವೆ. ಆದರೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು ಎನ್ನುವ ಉದ್ದೇಶ ನಮ್ಮ ರಾಜೀನಾಮೆ ಹಿಂದೆ ಇರಲಿಲ್ಲ. ಈಗ ಸರ್ಕಾರ ಪತನವಾಗಿದ್ದು, ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿದ್ದಾರೆ’ ಎಂದು ಹೇಳಿಕೊಂಡರು.</p>.<p class="Briefhead">‘ಕಾಂಗ್ರೆಸ್ನಲ್ಲಿ ಗೌರವ ಸಿಗದ ಕಾರಣ ನಾವೆಲ್ಲ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಇಲ್ಲಿ ನಮ್ಮ ಕ್ಷೇತ್ರಕ್ಕೆ ಅನುದಾನದ ಪ್ರಶ್ನೆ ಉದ್ಭವಿಸುವುದಿಲ್ಲ. ಸರ್ಕಾರದಿಂದ ನಮಗೆ ಅನ್ಯಾಯವೂ ಆಗಿಲ್ಲ’ ಎಂದು ಅವರು ದ್ವಂದ್ವ ಹೇಳಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>