‘ಬಸ್ ನಿಲ್ದಾಣ, ಸಾರ್ವಜನಿಕ ಶೌಚಾಲಯ, ಕುಡಿಯುವ ನೀರಿನ ಘಟಕಗಳಲ್ಲಿನ ಜಾಹೀರಾತು ಮತ್ತು ಫಲಕಗಳಲ್ಲಿ ಇರುವ ಜನಪ್ರತಿನಿಧಿಗಳ ಹೆಸರು ಮತ್ತು ಭಾವಚಿತ್ರಗಳನ್ನು ತೆಗೆದುಹಾಕಬೇಕು ಎಂದು ಸುಪ್ರಿಂ ಕೋರ್ಟ್ 2020 ಮೇ 13ರಂದು ಆದೇಶಿಸಿದೆ. ಅದನ್ನು ಪಾಲಿಸುತ್ತಿಲ್ಲ. ಸರ್ಕಾರದ ಹಣದಲ್ಲಿ ಜನಪ್ರತಿನಿಧಗಳು ಅಗತ್ಯಕ್ಕಿಂತ ಹೆಚ್ಚು ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ’ ಎಂದು ಅರ್ಜಿದಾರರು ದೂರಿದ್ದಾರೆ.