ಅಶೋಕ ಅವರು ಬುಧವಾರ (ಏಪ್ರಿಲ್ 10) ಮಠಕ್ಕೆ ಭೇಟಿ ನೀಡಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿ, ‘ಆದಿಚುಂಚನಗಿರಿ ಮಠವು ಬಿಜೆಪಿಯ ಶಕ್ತಿ ಕೇಂದ್ರ. ಈ ಮಠದ ಆಶೀರ್ವಾದ ಪಡೆದ ನಮ್ಮ ಎಲ್ಲ ಅಭ್ಯರ್ಥಿಗಳೂ ಗೆಲ್ಲುತ್ತಾರೆ. ಅದೇ ವಿಶ್ವಾಸದಿಂದ ಹೊರಡುತ್ತಿದ್ದೇವೆ’ ಎಂದು ಹೇಳಿದ್ದರು.