ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘ಬುಧವಾರ ದಿಂದಲೇ ನೀತಿಸಂಹಿತೆ ಜಾರಿಗೆ ಬಂದಿದೆ. ನೀತಿಸಂಹಿತೆ ನಿಬಂಧನೆಗಳು ಎಲ್ಲ ಅಭ್ಯರ್ಥಿಗಳು, ಎಲ್ಲ ರಾಜಕೀಯ ಪಕ್ಷಗಳು ಹಾಗೂ ರಾಜ್ಯ ಸರ್ಕಾರಕ್ಕೆ ಅನ್ವಯಿಸುತ್ತದೆ. ಕರ್ನಾಟಕ ಸರ್ಕಾರಕ್ಕೆ ಸಂಬಂಧಿಸಿದ ಘೋಷಣೆಗಳು, ನೀತಿ ಹಾಗೂ ನಿರ್ಧಾರಗಳು ಸೇರಿದಂತೆ ಮಾದರಿ ನೀತಿಸಂಹಿತೆಯು ಕೇಂದ್ರ ಸರ್ಕಾರಕ್ಕೂ ಅನ್ವಯಿಸುತ್ತದೆ’ ಎಂದು ಸ್ಪಷ್ಟಪಡಿಸಿದರು.