<p><strong>ಚಿತ್ರದುರ್ಗ</strong>: ರಾಜ್ಯದ ಹಲವೆಡೆ ಬೆಳಕಿಗೆ ಬಂದಿರುವ ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ ಪ್ರಕರಣಗಳ ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸುವ ಅಗತ್ಯವಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.</p>.<p>‘ಚಿತ್ರದುರ್ಗ, ಗದಗ, ಮೈಸೂರು ಸೇರಿ ರಾಜ್ಯದ ಹಲವೆಡೆ ಕಳಪೆ ಗುಣಮಟ್ಟದ ರಸಗೊಬ್ಬರ ಮಾರಾಟವಾಗಿರುವುದು ಗಮನಕ್ಕೆ ಬಂದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ ‘ವೆಂಕಟೇಶ್ವರ ಫರ್ಟಿಲೈಸರ್ಸ್’ನಿಂದ ಈ ಗೊಬ್ಬರ ಪೂರೈಕೆ ಆಗಿರುವುದು ಗೊತ್ತಾಗಿದೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅಂತರರಾಜ್ಯ ಪೊಲೀಸರ ನೆರವು ಪಡೆಯುವ ಅಗತ್ಯ ಇರುವುದರಿಂದ ತನಿಖೆಯ ಹೊಣೆಯನ್ನು ಸಿಐಡಿ ನೀಡುವುದು ಸೂಕ್ತ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕರ್ನಾಟಕದಲ್ಲಿ ರಸಗೊಬ್ಬರಕ್ಕೆ ಹೆಚ್ಚು ಸಬ್ಸಿಡಿ ಸಿಗುತ್ತಿದೆ. ಚೀಲ ಯೂರಿಯಾ ರಸಗೊಬ್ಬರಕ್ಕೆ ₹ 1,400 ಸಬ್ಸಿಡಿ ನೀಡಲಾಗುತ್ತಿದೆ. ನೆರೆಯ ರಾಜ್ಯಗಳಿಗೆ ರಸಗೊಬ್ಬರ ಕಳ್ಳಸಾಗಣೆ ಆಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಕೊಡಗು ಜಿಲ್ಲೆಯಿಂದ ಕೇರಳಕ್ಕೆ ರವಾನೆಯಾಗುತ್ತಿದ್ದ ರಸಗೊಬ್ಬರವನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ ಜಿಲ್ಲೆಯಲ್ಲಿಯೂ ಇಂತಹದೇ ಪ್ರಕರಣವನ್ನು ಪತ್ತೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಕೃಷಿ ಸಚಿವರಾದ ಬಳಿಕ ರಾಜ್ಯದಲ್ಲಿ ₹ 28 ಕೋಟಿ ಮೌಲ್ಯದ ಕಳಪೆ ರಸಗೊಬ್ಬರ ಹಾಗೂ ಬಿತ್ತನೆ ಬೀಜವನ್ನು ವಶಕ್ಕೆ ಪಡೆಯಲಾಗಿದೆ. 144 ಪರವಾನಗಿಗಳನ್ನು ರದ್ದುಪಡಿಸಲಾಗಿದ್ದು, 500ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಇದೊಂದು ದೊಡ್ಡ ಜಾಲವಾಗಿದ್ದು, ಶೀಘ್ರವೇ ಭೇದಿಸಲಾಗುವುದು. ಜಾಗೃತ ದಳವನ್ನು ಬಲಪಡಿಸಿ ನಿಗಾ ಇಡಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ರಾಜ್ಯದ ಹಲವೆಡೆ ಬೆಳಕಿಗೆ ಬಂದಿರುವ ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ ಪ್ರಕರಣಗಳ ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸುವ ಅಗತ್ಯವಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.</p>.<p>‘ಚಿತ್ರದುರ್ಗ, ಗದಗ, ಮೈಸೂರು ಸೇರಿ ರಾಜ್ಯದ ಹಲವೆಡೆ ಕಳಪೆ ಗುಣಮಟ್ಟದ ರಸಗೊಬ್ಬರ ಮಾರಾಟವಾಗಿರುವುದು ಗಮನಕ್ಕೆ ಬಂದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ ‘ವೆಂಕಟೇಶ್ವರ ಫರ್ಟಿಲೈಸರ್ಸ್’ನಿಂದ ಈ ಗೊಬ್ಬರ ಪೂರೈಕೆ ಆಗಿರುವುದು ಗೊತ್ತಾಗಿದೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅಂತರರಾಜ್ಯ ಪೊಲೀಸರ ನೆರವು ಪಡೆಯುವ ಅಗತ್ಯ ಇರುವುದರಿಂದ ತನಿಖೆಯ ಹೊಣೆಯನ್ನು ಸಿಐಡಿ ನೀಡುವುದು ಸೂಕ್ತ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕರ್ನಾಟಕದಲ್ಲಿ ರಸಗೊಬ್ಬರಕ್ಕೆ ಹೆಚ್ಚು ಸಬ್ಸಿಡಿ ಸಿಗುತ್ತಿದೆ. ಚೀಲ ಯೂರಿಯಾ ರಸಗೊಬ್ಬರಕ್ಕೆ ₹ 1,400 ಸಬ್ಸಿಡಿ ನೀಡಲಾಗುತ್ತಿದೆ. ನೆರೆಯ ರಾಜ್ಯಗಳಿಗೆ ರಸಗೊಬ್ಬರ ಕಳ್ಳಸಾಗಣೆ ಆಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಕೊಡಗು ಜಿಲ್ಲೆಯಿಂದ ಕೇರಳಕ್ಕೆ ರವಾನೆಯಾಗುತ್ತಿದ್ದ ರಸಗೊಬ್ಬರವನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ ಜಿಲ್ಲೆಯಲ್ಲಿಯೂ ಇಂತಹದೇ ಪ್ರಕರಣವನ್ನು ಪತ್ತೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಕೃಷಿ ಸಚಿವರಾದ ಬಳಿಕ ರಾಜ್ಯದಲ್ಲಿ ₹ 28 ಕೋಟಿ ಮೌಲ್ಯದ ಕಳಪೆ ರಸಗೊಬ್ಬರ ಹಾಗೂ ಬಿತ್ತನೆ ಬೀಜವನ್ನು ವಶಕ್ಕೆ ಪಡೆಯಲಾಗಿದೆ. 144 ಪರವಾನಗಿಗಳನ್ನು ರದ್ದುಪಡಿಸಲಾಗಿದ್ದು, 500ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಇದೊಂದು ದೊಡ್ಡ ಜಾಲವಾಗಿದ್ದು, ಶೀಘ್ರವೇ ಭೇದಿಸಲಾಗುವುದು. ಜಾಗೃತ ದಳವನ್ನು ಬಲಪಡಿಸಿ ನಿಗಾ ಇಡಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>