ಪಶ್ಚಿಮ ಬಂಗಾಳದ ಕೃಷ್ಣನಗರ ಹೋಟೆಲ್ನಲ್ಲಿ ಅಮಿತ್ ಮಾಳವೀಯಾ ಅವರನ್ನು ಭೇಟಿಯಾದ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ನೋಟಿಸ್ ನೀಡಲು ಮುಂದಾಗಿದ್ದರು. ಆದರೆ, ಪೊಲೀಸರು ತಂದಿದ್ದ ನೋಟಿಸ್ ಸ್ವೀಕರಿಸದ ಅಮಿತ್ ಮಾಳವೀಯಾ, ‘ಈಗಾಗಲೇ ಇ–ಮೇಲ್ ಮೂಲಕ ನನಗೆ ನೋಟಿಸ್ ಬಂದಿದೆ. ನೋಟಿಸ್ಗೆ ಉತ್ತರ ನೀಡಲು 7 ದಿನ ಅವಕಾಶವಿದೆಯೆಂದು ಹೇಳಿದ್ದಾರೆ’ ಎಂದು ಮೂಲಗಳು ತಿಳಿಸಿವೆ.