<p><strong>ಚಿಕ್ಕಬಳ್ಳಾಪುರ</strong>: ‘ಮೀಸಲಾತಿ ನೀಡಲುಜನಸಂಖ್ಯೆಗಿಂತ ಬಡತನವೇ ಮುಖ್ಯಮಾನದಂಡ ಆಗಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.</p>.<p>ತಾಲ್ಲೂಕಿನ ನಂದಿ ಗ್ರಾಮದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಆರ್ಥಿಕವಾಗಿ ಹಿಂದುಳಿದವರು ಎನ್ನುವ ಕಾರಣಕ್ಕೆ ಶೇ 10ರಷ್ಟು ಮೀಸಲಾತಿ ನೀಡಲಾಗಿದೆ. ಆ ಸಮಾಜದರು ನಮ್ಮಲ್ಲಿ ಎಷ್ಟು ಜನರು ಇದ್ದಾರೆ ಎನ್ನುವ ಚರ್ಚೆ ಮಾಡಿದರೆ ಅದು ಎಲ್ಲಿಗೊ ಹೋಗುತ್ತದೆ’ ಎಂದರು.</p>.<p>‘ಮೀಸಲಾತಿಗಾಗಿಪಂಚಮಸಾಲಿ ಮತ್ತು ಕುರುಬ ಸಮಾಜ ಹೋರಾಟ ನಡೆಸುತ್ತಿವೆ. ಜನಸಂಖ್ಯೆ ಆಧಾರದಲ್ಲಿ ಶೇ 12ರಷ್ಟು ಮೀಸಲಾತಿ ನೀಡುವಂತೆ ಒಕ್ಕಲಿಗರು ಸಹ ಆಗ್ರಹಿಸುತ್ತಿದ್ದಾರೆ. ಒಕ್ಕಲಿಗ ಸಮಾಜದ ಜಾತಿ, ಉಪಜಾತಿಗಳ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಮಾಹಿತಿ ಪಡೆದು ಆ ಆಧಾರದಲ್ಲಿ ಸರ್ಕಾರದ ಗಮನ ಸೆಳೆಯುವಂತೆ ಸಮುದಾಯದ ಸ್ವಾಮಿಗಳಲ್ಲಿ ಮನವಿ ಮಾಡಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ಮೀಸಲಾತಿ ನೀಡಲುಜನಸಂಖ್ಯೆಗಿಂತ ಬಡತನವೇ ಮುಖ್ಯಮಾನದಂಡ ಆಗಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.</p>.<p>ತಾಲ್ಲೂಕಿನ ನಂದಿ ಗ್ರಾಮದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಆರ್ಥಿಕವಾಗಿ ಹಿಂದುಳಿದವರು ಎನ್ನುವ ಕಾರಣಕ್ಕೆ ಶೇ 10ರಷ್ಟು ಮೀಸಲಾತಿ ನೀಡಲಾಗಿದೆ. ಆ ಸಮಾಜದರು ನಮ್ಮಲ್ಲಿ ಎಷ್ಟು ಜನರು ಇದ್ದಾರೆ ಎನ್ನುವ ಚರ್ಚೆ ಮಾಡಿದರೆ ಅದು ಎಲ್ಲಿಗೊ ಹೋಗುತ್ತದೆ’ ಎಂದರು.</p>.<p>‘ಮೀಸಲಾತಿಗಾಗಿಪಂಚಮಸಾಲಿ ಮತ್ತು ಕುರುಬ ಸಮಾಜ ಹೋರಾಟ ನಡೆಸುತ್ತಿವೆ. ಜನಸಂಖ್ಯೆ ಆಧಾರದಲ್ಲಿ ಶೇ 12ರಷ್ಟು ಮೀಸಲಾತಿ ನೀಡುವಂತೆ ಒಕ್ಕಲಿಗರು ಸಹ ಆಗ್ರಹಿಸುತ್ತಿದ್ದಾರೆ. ಒಕ್ಕಲಿಗ ಸಮಾಜದ ಜಾತಿ, ಉಪಜಾತಿಗಳ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಮಾಹಿತಿ ಪಡೆದು ಆ ಆಧಾರದಲ್ಲಿ ಸರ್ಕಾರದ ಗಮನ ಸೆಳೆಯುವಂತೆ ಸಮುದಾಯದ ಸ್ವಾಮಿಗಳಲ್ಲಿ ಮನವಿ ಮಾಡಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>