ಜಾರ್ಜ್ ಕಾಣೆಯಾಗಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ತಿರುಗೇಟು ನೀಡಿದ ಅವರು, ‘ಜಾರ್ಜ್ ಕಾಣೆಯಾಗಿಲ್ಲ. ದೆಹಲಿಗೆ ಬಂದು ಇಂಧನ ಸಚಿವರನ್ನು ಹಾಗೂ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಕೇಂದ್ರ ಗ್ರಿಡ್ನಿಂದ ಹೆಚ್ಚುವರಿ ವಿದ್ಯುತ್ ಒದಗಿಸುವಂತೆ ಒತ್ತಡ ಹೇರಿದ್ದೇನೆ’ ಎಂದರು. ನಾನು ಬಿಜೆಪಿ ಕಚೇರಿಗೆ ಹೋಗಿ ಕುಳಿತುಕೊಳ್ಳಬೇಕಾ ಅಥವಾ ಬೊಮ್ಮಾಯಿ ಮನೆಗೆ ಹೋಗಿ ಕುಳಿತುಕೊಳ್ಳಬೇಕಾ ಎಂದು ಪ್ರಶ್ನಿಸಿದರು.