‘ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಹಿರಿಯ ನಾಯಕರ ವಿರುದ್ಧ ಮಾತನಾಡಿದರೆ ಪಕ್ಷದಿಂದಲೇ ಕಿತ್ತು ಹಾಕಲಾಗುತ್ತದೆ. ಆದರೆ, ಬಿಜೆಪಿಯಲ್ಲಿ ಬಾಯಿಗೆ ಬಂದಂತೆ ಬೈದುಕೊಂಡು ಓಡಾಡಬಹುದು. ಈಶ್ವರಪ್ಪ, ಯತ್ನಾಳ್ ಮಾತನಾಡುತ್ತಲೇ ಇದ್ದಾರೆ. ಅವರ ವಿರುದ್ಧ ಮೊದಲು ಕ್ರಮ ತೆಗೆದುಕೊಳ್ಳಿ. ಧೈರ್ಯ ಇರುವುದು ಕುರ್ಚಿಗಲ್ಲ, ಅದರ ಮೇಲೆ ಕುಳಿತುಕೊಳ್ಳುವವರಿಗೆ’ ಎಂದೂ ಹೇಳಿದರು.