ಬ್ಯಾಂಕುಗಳಿಂದ ಸಾಲ ಪಡೆಯುವ ರೈತರಿಗೆ ವಿಮೆ ಮಾಡಿಸುವುದು ಕಡ್ಡಾಯ. ಮುಂಗಾರು ಹಂಗಾಮಿನಲ್ಲಿ ರೈತರು ಮಿತಿ ಮೀರಿ ಸಾಲ ಪಡೆಯುತ್ತಾರೆ. ಆದರೆ, ಹಿಂಗಾರು ರೈತರಿಗೆ ಸಾಲ ಪಡೆಯಲು ಆಗದಂಥ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ಸ್ವಲ್ಪ ಹಣವನ್ನು ಮೀಸಲಿಡುವಂತೆ ಬ್ಯಾಂಕುಗಳಿಗೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.