‘ಸರ್ಕಾರದ ಆದೇಶದಂತೆ, ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ತಲಾ ₹3 ಸಾವಿರ ಸಹಾಯಧನ ನೀಡುವ ಕಾರ್ಯವನ್ನು ಇಲಾಖೆ ಕೈಗೆತ್ತಿಕೊಂಡಿದ್ದು, ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುತ್ತಿದೆ. ಒಟ್ಟು, 17.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, ಈವರೆಗೆ 15.40 ಲಕ್ಷ ಕಾರ್ಮಿಕರಿಗೆ ಸಹಾಯಧನ ವರ್ಗಾಯಿಸಲಾಗಿದೆ. ಉಳಿದ 2.40 ಲಕ್ಷ ಕಾರ್ಮಿಕರ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿದ್ದು, ಅವರ ಖಾತೆಗಳನ್ನು ಚಾಲನೆಗೊಳಿಸಿದ ತಕ್ಷಣವೇ ₹3 ಸಾವಿರ ಜಮಾ ಮಾಡಲಾಗುವುದು’ ಎಂದು ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.