ಹೊರಗುತ್ತಿಗೆ ನೇಮಕಾತಿಯಡಿ ಮೀಸಲಾತಿ ನೀಡುವ ವಿಷಯವನ್ನು ಪ್ರಸ್ತಾಪಿಸಿದ ಅವರು, ‘ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀಡಬೇಕೆಂದು ಬಹಳ ಹಿಂದಿನಿಂದಲೂ ಒತ್ತಾಯಿಸಿದವರು ನಾವು. ಲಕ್ಷಾಂತರ ಹುದ್ದೆಗಳಿಗೆ ಯಾರಿಗೂ ಗೊತ್ತಿಲ್ಲದೇ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಮೀಸಲಾತಿ ನಿಯಮ ಪಾಲನೆ ಆಗುತ್ತಿಲ್ಲ’ ಎಂದು ಹೇಳಿದರು.