<p>ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್) ನ್ಯಾಯಾಲಯದ ಆದೇಶ</p><p>ಸಾರಿದೆ.</p><p>ಈ ಸಂಬಂಧ ಕಾಯ್ದಿರಿಸಿದ್ದ ಆದೇಶದ ನಿರ್ಣಯಾತ್ಮಕ ಭಾಗವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಶುಕ್ರವಾರ ಕಿಕ್ಕಿರಿದು ತುಂಬಿದ್ದ ತೆರೆದ ನ್ಯಾಯಾಲಯದಲ್ಲಿ (ಸಿಸಿಸಿಎಚ್–82) ಪ್ರಕಟಿಸಿದರು.</p><p>‘ಆರೋಪಿ ವಿರುದ್ಧದ ಭಾರತೀಯ ದಂಡ ಸಂಹಿತೆ–1860 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ–2008ರ ವಿವಿಧ ಕಲಂಗಳ ಅಡಿಯಲ್ಲಿನ ದೋಷಾರೋಪಗಳು ವಿಚಾರಣೆಯಲ್ಲಿ ಸಾಬೀತಾಗಿವೆ. ಹೀಗಾಗಿ, ಆರೋಪಿಯನ್ನು ಅಪರಾಧಿ ಎಂದು ತೀರ್ಮಾನಿಸಲಾಗಿದೆ. ಶಿಕ್ಷೆಯ ಪ್ರಮಾಣವನ್ನು ಶನಿವಾರ (ಆ.2) ನಿಗದಿಪಡಿಸಲಾಗುವುದು’ ಎಂದು ನ್ಯಾಯಾಧೀಶರು ಘೋಷಿಸಿದರು.</p><p>ಪ್ರಜ್ವಲ್ನನ್ನು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಾಸಿಕ್ಯೂಷನ್ ಪರ ಬಿ.ಎನ್.ಜಗದೀಶ್ ಮತ್ತು ಅಶೋಕ್ ಎನ್.ನಾಯಕ್ ವಾದ ಮಂಡಿಸಿದ್ದರು.</p>.<p><strong>ಯಾವುದೀ ಪ್ರಕರಣ?:</strong> ಲೋಕಸಭೆಗೆ 2024ರ ಏಪ್ರಿಲ್ನಿಂದ ಜೂನ್ ಮಧ್ಯಭಾಗದಲ್ಲಿ ವಿವಿಧ ಹಂತಗಳಲ್ಲಿ ನಡೆದ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ</p><p>ಸ್ಪರ್ಧಿಸಿದ್ದ. ಈ ವೇಳೆ ಸಂಸದನಾಗಿದ್ದ ಪ್ರಜ್ವಲ್ನದ್ದು ಎನ್ನಲಾದ ಲೈಂಗಿಕ ದೌರ್ಜನ್ಯ ಕೃತ್ಯಗಳ ಹಲವು ವಿಡಿಯೊಗಳು ಹಾಗೂ ಅಶ್ಲೀಲ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಬಿತ್ತರಗೊಂಡಿದ್ದವು. ಈ ವಿಡಿಯೊಗಳ ಪೈಕಿ 48 ವರ್ಷದ ಸಂತ್ರಸ್ತೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವಿಡಿಯೊ ಕೂಡಾ ಬಿತ್ತರಗೊಂಡಿತ್ತು.</p><p>ಪ್ರಜ್ವಲ್ ಸ್ವಯಂ ಚಿತ್ರೀಕರಿಸಿದ್ದ ಎನ್ನಲಾದ ಹತ್ತಾರು ಅಶ್ಲೀಲ ವಿಡಿಯೊ ಗಳು ವ್ಯಾಪಕವಾಗಿ ಬಿತ್ತರಗೊಂಡು ಸಾರ್ವಜನಿಕ ವಲಯದಲ್ಲಿ ಸಂಚಲನ ಮೂಡಿಸಿದ ಬೆನ್ನಲ್ಲೇ ಹಾಲಿ ಪ್ರಕರಣದ ಸಂತ್ರಸ್ತೆ, ತಮ್ಮ ಮನೆಯಿಂದ ಕಣ್ಮರೆಯಾಗಿದ್ದರು. ಈ ವೇಳೆ ಸಂತ್ರಸ್ತೆಯ ಪುತ್ರ 2024ರ ಮೇ 2ರಂದು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ, ಪ್ರಜ್ವಲ್ ತಂದೆಯೂ ಆಗಿರುವ, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮತ್ತು</p><p>ಸಂಬಂಧಿ ಸತೀಶ್ ಬಾಬಣ್ಣ ವಿರುದ್ಧ ‘ನನ್ನ ತಾಯಿಯ ಅಪಹರಣ ಮಾಡಲಾಗಿದೆ’ ಎಂದು ಆರೋಪಿಸಿ ದೂರು ದಾಖಲಿಸಿದ್ದರು.</p><p>ಕ್ರಿಮಿನಲ್ ದೂರು ದಾಖಲಿಸಿ ಕೊಂಡು ಪ್ರಕರಣವನ್ನು ಭೇದಿಸಿದ್ದ ವಿಶೇಷ ತನಿಖಾ ತಂಡದ (ಎಸ್ಐಟಿ) ಪೊಲೀಸರು ಸಂತ್ರಸ್ತೆಯು </p><p>ತೋಟದ ಮನೆಯೊಂದರಲ್ಲಿ ಇದ್ದ ಜಾಡನ್ನು ಪತ್ತೆ ಹಚ್ಚಿದ್ದರು. ವಿಚಾರಣೆ ವೇಳೆ ಸಂತ್ರಸ್ತೆಯು, ‘ಪ್ರಜ್ವಲ್ ನನ್ನ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಹಾಗೂ ಅತ್ಯಾಚಾರ ಮಾಡಿದ್ದಾರೆ’ ಎಂದು ಆರೋಪಿಸಿದ್ದರು.</p><p>ಈ ಸಂಬಂಧ ಸಿಐಡಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ, ಭಾರತೀಯ ದಂಡ ಸಂಹಿತೆ–1860ರ ಕಲಂ 376(2)(ಕೆ), 376(2)</p><p>(ಎನ್), 354(ಎ)(ಬಿ)(ಸಿ), 506, 201 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ–2008ರ ಕಲಂ 66(ಇ) ಅಡಿ ಎಫ್ಐಆರ್ ದಾಖಲು ಮಾಡಲಾಗಿತ್ತು. ಬಳಿಕ ಸಂತ್ರಸ್ತೆಯನ್ನು ಸಕ್ಷಮ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ–1973ರ (ಸಿಆರ್ಪಿಸಿ) ಕಲಂ 164ರ ಅಡಿ ಹೇಳಿಕೆ ದಾಖಲು ಮಾಡಿಸಲಾಗಿತ್ತು. </p>.<h2>ಯಾವುದಕ್ಕೆ ಎಷ್ಟು ಶಿಕ್ಷೆ?</h2><p>376(2)(ಕೆ) ಅತ್ಯಾಚಾರ-ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ. 354(ಎ)–ಲೈಂಗಿಕ ಕಿರುಕುಳ, ಬಲವಂತದ ದೈಹಿಕ ಸಂಪರ್ಕ-ಕನಿಷ್ಠ 3 ವರ್ಷ</p><p>376(2)(ಎನ್)-ಸಾರ್ವಜನಿಕ ಸೇವಕ ಅಧಿಕಾರ ದುರ್ಬಳಕೆ ಮಾಡಿ ಎಸಗಿದ ಅತ್ಯಾಚಾರ- ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ. 354(ಬಿ)–ಬಲವಂತದಿಂದ ವಿವಸ್ತ್ರಗೊಳಿಸುವುದು-ಕನಿಷ್ಠ 3 ವರ್ಷ, ಗರಿಷ್ಠ 7 ವರ್ಷ</p><p>354(ಸಿ)-ಮಹಿಳೆಯ ಖಾಸಗಿ ಚಿತ್ರ ಸೆರೆ ಹಿಡಿಯುವುದು-ಕನಿಷ್ಠ 1 ವರ್ಷ, ಗರಿಷ್ಠ 3 ವರ್ಷ</p><p>506-ಕ್ರಿಮಿನಲ್ ಬೆದರಿಕೆ-ಕನಿಷ್ಠ 2 ವರ್ಷ, ಗರಿಷ್ಠ 7 ವರ್ಷ</p><p>201-ಸಾಕ್ಷ್ಯ ನಾಶ-ಕನಿಷ್ಠ 3 ವರ್ಷ, ಗರಿಷ್ಠ 7 ವರ್ಷ</p><p>ಮಾಹಿತಿ ತಂತ್ರಜ್ಞಾನ ಕಾಯ್ದೆ–2008ರ ಕಲಂ 66(ಇ)-ವ್ಯಕ್ತಿಯ ಗೋಪ್ಯತೆಯ ಉಲ್ಲಂಘನೆ-3 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ಗರಿಷ್ಟ ₹2 ಲಕ್ಷ ದಂಡ.</p>.<h2>ಶನಿವಾರ ಏನೇನು ನಡೆಯಲಿದೆ?</h2><p>ಅಪರಾಧಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ. ನ್ಯಾಯಾಧೀಶರು ಶಿಕ್ಷೆಯ ಪ್ರಮಾಣವನ್ನು ಘೋಷಿಸುವ ಮುನ್ನ, ‘ಕಾನೂನು ಅಡಿಯಲ್ಲಿ ವಿಧಿಸಲಾಗುತ್ತಿರುವ ಈ ಶಿಕ್ಷೆಯ ಪ್ರಮಾಣವು ಗರಿಷ್ಠವಾಗದಂತೆ ಕಡಿಮೆ ಮಾಡಲು ಏನಾದರೂ ಸಕಾರಣಗಳಿವೆಯೇ’ ಎಂದು ಅಪರಾಧಿಯನ್ನು ಪ್ರಶ್ನಿಸುತ್ತಾರೆ. ಆಗ ಅಪರಾಧಿ ಇಂತಿಂತಹ ಕಾರಣಗಳಿಗಾಗಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂದು ಕೇಳಿಕೊಳ್ಳಲು ಅವಕಾಶ ಇರುತ್ತದೆ.</p><p>ಅಪರಾಧಿ ಖುದ್ದಾಗಿ ಮಾಡುವ ಈ ಮೌಖಿಕ ಮನವಿ ಸಕಾರಣವಾಗಿದೆ ಎಂದಾದಲ್ಲಿ ಅಥವಾ ನ್ಯಾಯಾಧೀಶರಿಗೆ ಮನವರಿಕೆ ಆಗುವಂತಿದ್ದಲ್ಲಿ ಶಿಕ್ಷೆಯ ಪ್ರಮಾಣವನ್ನು ಗರಿಷ್ಠ ಮಟ್ಟದಿಂದ ಕನಿಷ್ಠತಮಕ್ಕೆ ಇಳಿಸಲು ಅವಕಾಶ ಇರುತ್ತದೆ. ನಂತರ ಈ ಹೇಳಿಕೆಯನ್ನು ಪರಿಗಣಿಸಿ ನ್ಯಾಯಾಧೀಶರು ಶಿಕ್ಷೆಯ ಪ್ರಮಾಣವನ್ನು ನಿಗದಿಗೊಳಿಸುತ್ತಾರೆ. </p>.<h2>ಬಿ.ಕೆ. ಸಿಂಗ್ ನೇತೃತ್ವದ ಎಸ್ಐಟಿ</h2><p>ಪ್ರಕರಣದ ತನಿಖೆ ನಡೆಸಲು ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಲಾಗಿತ್ತು. ತಂಡದಲ್ಲಿ ಐಪಿಎಸ್ ಅಧಿಕಾರಿ ಸುಮನ್ ಡಿ. ಪನ್ನೇಕರ್, ಸೀಮಾ ಲಾಟ್ಕರ್ ಇದ್ದರು. ತನಿಖಾಧಿಕಾರಿಯಾಗಿ ಬಿ.ಸುಮಾರಾಣಿ ಅವರನ್ನು ನೇಮಿಸಲಾಗಿತ್ತು.</p>.<h2>ಪ್ರತಿಕ್ರಿಯಿಸದ ಎಚ್.ಡಿ. ರೇವಣ್ಣ</h2><p>ತಮ್ಮ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನ್ಯಾಯಾಲಯ ಶಿಕ್ಷೆ ವಿಧಿಸಿ ನೀಡಿದ ತೀರ್ಪಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ನಿರಾಕರಿಸಿದರು.</p><p>ತೀರ್ಪು ಹೊರಬೀಳುವ ವೇಳೆಗೆ ವಿಧಾನಸೌಧದಲ್ಲಿದ್ದ ರೇವಣ್ಣ ಅವರ ಪ್ರತಿಕ್ರಿಯೆ ಕೇಳಲು ಮಾಧ್ಯಮ ಪ್ರತಿನಿಧಿಗಳು ಕಾದು ನಿಂತಿದ್ದರು.</p><p>ವಿಧಾನಸೌಧದಿಂದ ಹೊರ ಬಂದ ರೇವಣ್ಣ ಅವರನ್ನು ಮಾತ ನಾಡಿಸಲು ಸುದ್ದಿ ವಾಹಿನಿಯ ಕ್ಯಾಮೆರಾಗಳು, ಪತ್ರಕರ್ತರು ಸುತ್ತುವರೆದಾಗ, ತಲೆ ತಗ್ಗಿಸಿ, ಮೌನವಾಗಿ ಹೊರ ನಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್) ನ್ಯಾಯಾಲಯದ ಆದೇಶ</p><p>ಸಾರಿದೆ.</p><p>ಈ ಸಂಬಂಧ ಕಾಯ್ದಿರಿಸಿದ್ದ ಆದೇಶದ ನಿರ್ಣಯಾತ್ಮಕ ಭಾಗವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಶುಕ್ರವಾರ ಕಿಕ್ಕಿರಿದು ತುಂಬಿದ್ದ ತೆರೆದ ನ್ಯಾಯಾಲಯದಲ್ಲಿ (ಸಿಸಿಸಿಎಚ್–82) ಪ್ರಕಟಿಸಿದರು.</p><p>‘ಆರೋಪಿ ವಿರುದ್ಧದ ಭಾರತೀಯ ದಂಡ ಸಂಹಿತೆ–1860 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ–2008ರ ವಿವಿಧ ಕಲಂಗಳ ಅಡಿಯಲ್ಲಿನ ದೋಷಾರೋಪಗಳು ವಿಚಾರಣೆಯಲ್ಲಿ ಸಾಬೀತಾಗಿವೆ. ಹೀಗಾಗಿ, ಆರೋಪಿಯನ್ನು ಅಪರಾಧಿ ಎಂದು ತೀರ್ಮಾನಿಸಲಾಗಿದೆ. ಶಿಕ್ಷೆಯ ಪ್ರಮಾಣವನ್ನು ಶನಿವಾರ (ಆ.2) ನಿಗದಿಪಡಿಸಲಾಗುವುದು’ ಎಂದು ನ್ಯಾಯಾಧೀಶರು ಘೋಷಿಸಿದರು.</p><p>ಪ್ರಜ್ವಲ್ನನ್ನು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಾಸಿಕ್ಯೂಷನ್ ಪರ ಬಿ.ಎನ್.ಜಗದೀಶ್ ಮತ್ತು ಅಶೋಕ್ ಎನ್.ನಾಯಕ್ ವಾದ ಮಂಡಿಸಿದ್ದರು.</p>.<p><strong>ಯಾವುದೀ ಪ್ರಕರಣ?:</strong> ಲೋಕಸಭೆಗೆ 2024ರ ಏಪ್ರಿಲ್ನಿಂದ ಜೂನ್ ಮಧ್ಯಭಾಗದಲ್ಲಿ ವಿವಿಧ ಹಂತಗಳಲ್ಲಿ ನಡೆದ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ</p><p>ಸ್ಪರ್ಧಿಸಿದ್ದ. ಈ ವೇಳೆ ಸಂಸದನಾಗಿದ್ದ ಪ್ರಜ್ವಲ್ನದ್ದು ಎನ್ನಲಾದ ಲೈಂಗಿಕ ದೌರ್ಜನ್ಯ ಕೃತ್ಯಗಳ ಹಲವು ವಿಡಿಯೊಗಳು ಹಾಗೂ ಅಶ್ಲೀಲ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಬಿತ್ತರಗೊಂಡಿದ್ದವು. ಈ ವಿಡಿಯೊಗಳ ಪೈಕಿ 48 ವರ್ಷದ ಸಂತ್ರಸ್ತೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವಿಡಿಯೊ ಕೂಡಾ ಬಿತ್ತರಗೊಂಡಿತ್ತು.</p><p>ಪ್ರಜ್ವಲ್ ಸ್ವಯಂ ಚಿತ್ರೀಕರಿಸಿದ್ದ ಎನ್ನಲಾದ ಹತ್ತಾರು ಅಶ್ಲೀಲ ವಿಡಿಯೊ ಗಳು ವ್ಯಾಪಕವಾಗಿ ಬಿತ್ತರಗೊಂಡು ಸಾರ್ವಜನಿಕ ವಲಯದಲ್ಲಿ ಸಂಚಲನ ಮೂಡಿಸಿದ ಬೆನ್ನಲ್ಲೇ ಹಾಲಿ ಪ್ರಕರಣದ ಸಂತ್ರಸ್ತೆ, ತಮ್ಮ ಮನೆಯಿಂದ ಕಣ್ಮರೆಯಾಗಿದ್ದರು. ಈ ವೇಳೆ ಸಂತ್ರಸ್ತೆಯ ಪುತ್ರ 2024ರ ಮೇ 2ರಂದು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ, ಪ್ರಜ್ವಲ್ ತಂದೆಯೂ ಆಗಿರುವ, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮತ್ತು</p><p>ಸಂಬಂಧಿ ಸತೀಶ್ ಬಾಬಣ್ಣ ವಿರುದ್ಧ ‘ನನ್ನ ತಾಯಿಯ ಅಪಹರಣ ಮಾಡಲಾಗಿದೆ’ ಎಂದು ಆರೋಪಿಸಿ ದೂರು ದಾಖಲಿಸಿದ್ದರು.</p><p>ಕ್ರಿಮಿನಲ್ ದೂರು ದಾಖಲಿಸಿ ಕೊಂಡು ಪ್ರಕರಣವನ್ನು ಭೇದಿಸಿದ್ದ ವಿಶೇಷ ತನಿಖಾ ತಂಡದ (ಎಸ್ಐಟಿ) ಪೊಲೀಸರು ಸಂತ್ರಸ್ತೆಯು </p><p>ತೋಟದ ಮನೆಯೊಂದರಲ್ಲಿ ಇದ್ದ ಜಾಡನ್ನು ಪತ್ತೆ ಹಚ್ಚಿದ್ದರು. ವಿಚಾರಣೆ ವೇಳೆ ಸಂತ್ರಸ್ತೆಯು, ‘ಪ್ರಜ್ವಲ್ ನನ್ನ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಹಾಗೂ ಅತ್ಯಾಚಾರ ಮಾಡಿದ್ದಾರೆ’ ಎಂದು ಆರೋಪಿಸಿದ್ದರು.</p><p>ಈ ಸಂಬಂಧ ಸಿಐಡಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ, ಭಾರತೀಯ ದಂಡ ಸಂಹಿತೆ–1860ರ ಕಲಂ 376(2)(ಕೆ), 376(2)</p><p>(ಎನ್), 354(ಎ)(ಬಿ)(ಸಿ), 506, 201 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ–2008ರ ಕಲಂ 66(ಇ) ಅಡಿ ಎಫ್ಐಆರ್ ದಾಖಲು ಮಾಡಲಾಗಿತ್ತು. ಬಳಿಕ ಸಂತ್ರಸ್ತೆಯನ್ನು ಸಕ್ಷಮ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ–1973ರ (ಸಿಆರ್ಪಿಸಿ) ಕಲಂ 164ರ ಅಡಿ ಹೇಳಿಕೆ ದಾಖಲು ಮಾಡಿಸಲಾಗಿತ್ತು. </p>.<h2>ಯಾವುದಕ್ಕೆ ಎಷ್ಟು ಶಿಕ್ಷೆ?</h2><p>376(2)(ಕೆ) ಅತ್ಯಾಚಾರ-ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ. 354(ಎ)–ಲೈಂಗಿಕ ಕಿರುಕುಳ, ಬಲವಂತದ ದೈಹಿಕ ಸಂಪರ್ಕ-ಕನಿಷ್ಠ 3 ವರ್ಷ</p><p>376(2)(ಎನ್)-ಸಾರ್ವಜನಿಕ ಸೇವಕ ಅಧಿಕಾರ ದುರ್ಬಳಕೆ ಮಾಡಿ ಎಸಗಿದ ಅತ್ಯಾಚಾರ- ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ. 354(ಬಿ)–ಬಲವಂತದಿಂದ ವಿವಸ್ತ್ರಗೊಳಿಸುವುದು-ಕನಿಷ್ಠ 3 ವರ್ಷ, ಗರಿಷ್ಠ 7 ವರ್ಷ</p><p>354(ಸಿ)-ಮಹಿಳೆಯ ಖಾಸಗಿ ಚಿತ್ರ ಸೆರೆ ಹಿಡಿಯುವುದು-ಕನಿಷ್ಠ 1 ವರ್ಷ, ಗರಿಷ್ಠ 3 ವರ್ಷ</p><p>506-ಕ್ರಿಮಿನಲ್ ಬೆದರಿಕೆ-ಕನಿಷ್ಠ 2 ವರ್ಷ, ಗರಿಷ್ಠ 7 ವರ್ಷ</p><p>201-ಸಾಕ್ಷ್ಯ ನಾಶ-ಕನಿಷ್ಠ 3 ವರ್ಷ, ಗರಿಷ್ಠ 7 ವರ್ಷ</p><p>ಮಾಹಿತಿ ತಂತ್ರಜ್ಞಾನ ಕಾಯ್ದೆ–2008ರ ಕಲಂ 66(ಇ)-ವ್ಯಕ್ತಿಯ ಗೋಪ್ಯತೆಯ ಉಲ್ಲಂಘನೆ-3 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ಗರಿಷ್ಟ ₹2 ಲಕ್ಷ ದಂಡ.</p>.<h2>ಶನಿವಾರ ಏನೇನು ನಡೆಯಲಿದೆ?</h2><p>ಅಪರಾಧಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ. ನ್ಯಾಯಾಧೀಶರು ಶಿಕ್ಷೆಯ ಪ್ರಮಾಣವನ್ನು ಘೋಷಿಸುವ ಮುನ್ನ, ‘ಕಾನೂನು ಅಡಿಯಲ್ಲಿ ವಿಧಿಸಲಾಗುತ್ತಿರುವ ಈ ಶಿಕ್ಷೆಯ ಪ್ರಮಾಣವು ಗರಿಷ್ಠವಾಗದಂತೆ ಕಡಿಮೆ ಮಾಡಲು ಏನಾದರೂ ಸಕಾರಣಗಳಿವೆಯೇ’ ಎಂದು ಅಪರಾಧಿಯನ್ನು ಪ್ರಶ್ನಿಸುತ್ತಾರೆ. ಆಗ ಅಪರಾಧಿ ಇಂತಿಂತಹ ಕಾರಣಗಳಿಗಾಗಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂದು ಕೇಳಿಕೊಳ್ಳಲು ಅವಕಾಶ ಇರುತ್ತದೆ.</p><p>ಅಪರಾಧಿ ಖುದ್ದಾಗಿ ಮಾಡುವ ಈ ಮೌಖಿಕ ಮನವಿ ಸಕಾರಣವಾಗಿದೆ ಎಂದಾದಲ್ಲಿ ಅಥವಾ ನ್ಯಾಯಾಧೀಶರಿಗೆ ಮನವರಿಕೆ ಆಗುವಂತಿದ್ದಲ್ಲಿ ಶಿಕ್ಷೆಯ ಪ್ರಮಾಣವನ್ನು ಗರಿಷ್ಠ ಮಟ್ಟದಿಂದ ಕನಿಷ್ಠತಮಕ್ಕೆ ಇಳಿಸಲು ಅವಕಾಶ ಇರುತ್ತದೆ. ನಂತರ ಈ ಹೇಳಿಕೆಯನ್ನು ಪರಿಗಣಿಸಿ ನ್ಯಾಯಾಧೀಶರು ಶಿಕ್ಷೆಯ ಪ್ರಮಾಣವನ್ನು ನಿಗದಿಗೊಳಿಸುತ್ತಾರೆ. </p>.<h2>ಬಿ.ಕೆ. ಸಿಂಗ್ ನೇತೃತ್ವದ ಎಸ್ಐಟಿ</h2><p>ಪ್ರಕರಣದ ತನಿಖೆ ನಡೆಸಲು ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಲಾಗಿತ್ತು. ತಂಡದಲ್ಲಿ ಐಪಿಎಸ್ ಅಧಿಕಾರಿ ಸುಮನ್ ಡಿ. ಪನ್ನೇಕರ್, ಸೀಮಾ ಲಾಟ್ಕರ್ ಇದ್ದರು. ತನಿಖಾಧಿಕಾರಿಯಾಗಿ ಬಿ.ಸುಮಾರಾಣಿ ಅವರನ್ನು ನೇಮಿಸಲಾಗಿತ್ತು.</p>.<h2>ಪ್ರತಿಕ್ರಿಯಿಸದ ಎಚ್.ಡಿ. ರೇವಣ್ಣ</h2><p>ತಮ್ಮ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನ್ಯಾಯಾಲಯ ಶಿಕ್ಷೆ ವಿಧಿಸಿ ನೀಡಿದ ತೀರ್ಪಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ನಿರಾಕರಿಸಿದರು.</p><p>ತೀರ್ಪು ಹೊರಬೀಳುವ ವೇಳೆಗೆ ವಿಧಾನಸೌಧದಲ್ಲಿದ್ದ ರೇವಣ್ಣ ಅವರ ಪ್ರತಿಕ್ರಿಯೆ ಕೇಳಲು ಮಾಧ್ಯಮ ಪ್ರತಿನಿಧಿಗಳು ಕಾದು ನಿಂತಿದ್ದರು.</p><p>ವಿಧಾನಸೌಧದಿಂದ ಹೊರ ಬಂದ ರೇವಣ್ಣ ಅವರನ್ನು ಮಾತ ನಾಡಿಸಲು ಸುದ್ದಿ ವಾಹಿನಿಯ ಕ್ಯಾಮೆರಾಗಳು, ಪತ್ರಕರ್ತರು ಸುತ್ತುವರೆದಾಗ, ತಲೆ ತಗ್ಗಿಸಿ, ಮೌನವಾಗಿ ಹೊರ ನಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>