ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೊಬೈಲ್ ಟ್ರ್ಯಾಪ್ ಮಾಡಿದರೆ ಪ್ರಜ್ವಲ್ ರೇವಣ್ಣ ಪರಾರಿಯಾಗಲು ಯಾರು ಸಹಕರಿಸಿದವರು ಯಾರು ಎಂಬುದು ಗೊತ್ತಾಗುತ್ತೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು. ಬೀದರ್ನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣನನ್ನು ಬಿಟ್ಟವ್ರು ಸಿದ್ದರಾಮಯ್ಯನವರು, ಆದರೆ ಪ್ರಶ್ನೆ ಮೋದಿಯವರಿಗೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಪೊಲೀಸ್ನವರು ಇದ್ದಾರ ಅಥವಾ ಸತ್ತಿದ್ದಾರಾ? ಇಂಟೆಲಿಜೆನ್ಸ್ನವರು ಏನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಪ್ರಕರಣದಲ್ಲಿ ರಾಜ್ಯ ಸರ್ಕಾರದ ತಪ್ಪು ಕೇಂದ್ರದ ಮೇಲೆ ಹೊರಿಸುತ್ತಿರುವುದೇಕೆ? ಕಾನೂನು ಸುವ್ಯವಸ್ಥೆ ನಮ್ಮ ಜವಾಬ್ದಾರಿ ಅಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಲಿಖಿತವಾಗಿ ಬರೆದುಕೊಡಲಿ, ದೇವೇಗೌಡರಿಗೆ ಅಪಮಾನ ಮಾಡಬೇಕೆಂಬ ಸ್ಕೀಮ್ ಇದು ಎಂದು ಆರೋಪಿಸಿದರು.