ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ಫೋನ್ ಟ್ರ್ಯಾಪ್ ಮಾಡಿ, ಪ್ರಜ್ವಲ್‌ಗೆ ಸಹಕರಿಸಿದವರ ಬಗ್ಗೆ ತಿಳಿಯುತ್ತೆ: ಅಶೋಕ

Published 3 ಮೇ 2024, 13:03 IST
Last Updated 3 ಮೇ 2024, 13:03 IST
ಅಕ್ಷರ ಗಾತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೊಬೈಲ್ ಟ್ರ್ಯಾಪ್ ಮಾಡಿದರೆ ಪ್ರಜ್ವಲ್ ರೇವಣ್ಣ ಪರಾರಿಯಾಗಲು ಯಾರು ಸಹಕರಿಸಿದವರು ಯಾರು ಎಂಬುದು ಗೊತ್ತಾಗುತ್ತೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು. ಬೀದರ್‌ನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣನನ್ನು ಬಿಟ್ಟವ್ರು ಸಿದ್ದರಾಮಯ್ಯನವರು, ಆದರೆ ಪ್ರಶ್ನೆ ಮೋದಿಯವರಿಗೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಪೊಲೀಸ್‌ನವರು ಇದ್ದಾರ ಅಥವಾ ಸತ್ತಿದ್ದಾರಾ? ಇಂಟೆಲಿಜೆನ್ಸ್‌ನವರು ಏನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಪ್ರಕರಣದಲ್ಲಿ ರಾಜ್ಯ ಸರ್ಕಾರದ ತಪ್ಪು ಕೇಂದ್ರದ ಮೇಲೆ ಹೊರಿಸುತ್ತಿರುವುದೇಕೆ? ಕಾನೂನು ಸುವ್ಯವಸ್ಥೆ ನಮ್ಮ ಜವಾಬ್ದಾರಿ ಅಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಲಿಖಿತವಾಗಿ ಬರೆದುಕೊಡಲಿ, ದೇವೇಗೌಡರಿಗೆ ಅಪಮಾನ ಮಾಡಬೇಕೆಂಬ ಸ್ಕೀಮ್ ಇದು ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT