ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್, ಜಾಗತಿಕ ಮಟ್ಟದಲ್ಲಿ ಈ ಪ್ರಕರಣ ಸದ್ದು ಮಾಡಿದ್ದರೂ ದೇಶದ ಗೃಹಸಚಿವರಾಗಿ ಅಮಿತ್ ಶಾ ಅವರು ತಮ್ಮ ಹೊಣೆಗಾರಿಕೆ ಪ್ರದರ್ಶಿಸಿಲ್ಲವೇಕೆ? ಎಂದು ಕಿಡಿಕಾರಿದ್ದಾರೆ.
ಅಮಿತ್ ಶಾ ಅವರೇ ಹೇಳಿಕೊಂಡಂತೆ ಅವರಿಗೆ ನಾರಿ ಶಕ್ತಿ, ಮಾತೃ ಶಕ್ತಿಯ ಬಗ್ಗೆ ಬಹಳ ಗೌರವವಿದೆಯಂತೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತ ಮಹಿಳೆಯರು ತೀವ್ರ ಆತಂಕ, ನೋವಿನಲ್ಲಿದ್ದಾರೆ. ಕರ್ನಾಟಕದಲ್ಲಿಯೇ ಇರುವ ಅಮಿತ್ ಶಾ ಅವರು ಸಂತ್ರಸ್ತೆಯರನ್ನು ಮಹಿಳೆಯರು ಭೇಟಿಯಾಗಿ ಸಂತೈಸಿಲ್ಲ ಏಕೆ? ಎಂದು ವಾಗ್ದಾಳಿ ನಡೆಸಿದ್ದಾರೆ.