ಏನಿದು ಅರ್ಜಿ?: ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ಎಸ್ ಪಕ್ಷವು, ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಆದರೆ, ಹೊಳೆನರಸೀಪುರ ಪೊಲೀಸರು, ‘ಈಗಾಗಲೇ ದೂರು ದಾಖಲಾಗಿದ್ದು, ಮತ್ತೊಂದು ದೂರು ದಾಖಲಿಸಿಕೊಳ್ಳುವುದಿಲ್ಲ’ ಎಂಬ ಹಿಂಬರಹ ನೀಡಿದ್ದರು. ‘ಈ ಹಿಂಬರಹವನ್ನು ರದ್ದುಪಡಿಸಿ ದೂರು ದಾಖಲಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಕೆಆರ್ಎಸ್ಪಿ ಈ ಅರ್ಜಿ ಸಲ್ಲಿಸಿದೆ.