ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, 'ಸದಸ್ಯರೊಬ್ಬರು ಕಲಾಪದ ವೇಳೆ ಮೊಬೈಲ್ ನಲ್ಲಿ ಕೆಲವು ದೃಶ್ಯಗಳನ್ನು ವೀಕ್ಷಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಪ್ರಕರಣವನ್ನು ನೀತಿ ನಿರೂಪಣಾ ಸಮಿತಿಗೆ ವಹಿಸಲಾಗಿದೆ' ಎಂದು ಪ್ರಕಟಿಸಿದರು.