‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಸ್ಥಳೀಯ ಜನಪ್ರತಿನಿಧಿಗಳು, ಬಿಜೆಪಿ ಕಾರ್ಯಕರ್ತರು ಜನರ ಮನೆ ಬಾಗಿಲಿಗೆ ಮುಟ್ಟಿಸಬೇಕು. ಒಂದು ತಿಂಗಳ ಅವಧಿಯಲ್ಲಿ ಎಲ್ಲರಿಗೂ ಯೋಜನೆ ಬಗ್ಗೆ ಮಾಹಿತಿ ನೀಡುವ ಸಂಕಲ್ಪ ಮಾಡಬೇಕು. ಯುಪಿಎ ಅವಧಿಯಲ್ಲಿಯೂ ಸಾಲ ಮನ್ನಾ ಮಾಡಲಾಗಿತ್ತು. ಆದರೆ, ಏನಾಯ್ತು, ಎಷ್ಟು ಮಂದಿಗೆ ಅದರ ಪ್ರಯೋಜನ ದೊರಕಿದೆ ಎಂದು ಯಾರಿಗೂ ತಿಳಿದಿಲ್ಲ. ಆದರೆ, ಬಿಜೆಪಿ ಆಡಳಿತದಲ್ಲಿ ₹23 ಲಕ್ಷ ಕೋಟಿ ಸಾಲಮನ್ನಾ ಮಾಡಲಾಗಿದೆ. ಇದು ಆಡಳಿತದಲ್ಲಾದ ಬದಲಾವಣೆ’ ಎಂದು ಹೇಳಿದರು.