<p><strong>ಚಿತ್ರದುರ್ಗ: </strong>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕೆಲಸಕ್ಕೆ ಯಾರೊಬ್ಬರೂ ಅಡ್ಡಿಪಡಿಸಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.</p>.<p>ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಸ್ತಾವ ರಾಷ್ಟ್ರೀಯ ನಾಯಕರ ಮುಂದಿಲ್ಲ. ಕೋವಿಡ್ ಸಂದರ್ಭದಲ್ಲಿ ಜನರ ಆರೋಗ್ಯ ರಕ್ಷಣೆಯೇ ಆದ್ಯ ಕರ್ತವ್ಯ. ಮುಖ್ಯಮಂತ್ರಿಗೆ ಯಾರೂ ತೊಂದರೆ ನೀಡಬಾರದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<p>‘ಕೋವಿಡ್ಗೆ ಬಲಿಯಾದವರ ಕುಟುಂಬಗಳು ಎದುರಿಸುತ್ತಿರುವ ನೋವು ಅರ್ಥವಾಗಿದೆ. ಕೋವಿಡ್ ಅನ್ನು ಸರ್ಕಾರ ಸಮರ್ಥವಾಗಿ ನಿರ್ವಹಿಸುತ್ತಿದೆ. ಆಮ್ಲಜನಕದ ಕೊರತೆ ಉಂಟಾಗದಂತೆ ನೋಡಿಕೊಳ್ಳುತ್ತಿದೆ. ಅಧಿಕಾರದ ಸಂದರ್ಭದಲ್ಲಿ ಭ್ರಷ್ಟಾಚಾರ ಮಾಡಿ ರೂಢಿ ಇರುವ ಕಾಂಗ್ರೆಸ್, ವಿನಾ ಕಾರಣ ಆರೋಪ ಮಾಡುತ್ತಿದೆ’ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕೆಲಸಕ್ಕೆ ಯಾರೊಬ್ಬರೂ ಅಡ್ಡಿಪಡಿಸಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.</p>.<p>ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಸ್ತಾವ ರಾಷ್ಟ್ರೀಯ ನಾಯಕರ ಮುಂದಿಲ್ಲ. ಕೋವಿಡ್ ಸಂದರ್ಭದಲ್ಲಿ ಜನರ ಆರೋಗ್ಯ ರಕ್ಷಣೆಯೇ ಆದ್ಯ ಕರ್ತವ್ಯ. ಮುಖ್ಯಮಂತ್ರಿಗೆ ಯಾರೂ ತೊಂದರೆ ನೀಡಬಾರದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<p>‘ಕೋವಿಡ್ಗೆ ಬಲಿಯಾದವರ ಕುಟುಂಬಗಳು ಎದುರಿಸುತ್ತಿರುವ ನೋವು ಅರ್ಥವಾಗಿದೆ. ಕೋವಿಡ್ ಅನ್ನು ಸರ್ಕಾರ ಸಮರ್ಥವಾಗಿ ನಿರ್ವಹಿಸುತ್ತಿದೆ. ಆಮ್ಲಜನಕದ ಕೊರತೆ ಉಂಟಾಗದಂತೆ ನೋಡಿಕೊಳ್ಳುತ್ತಿದೆ. ಅಧಿಕಾರದ ಸಂದರ್ಭದಲ್ಲಿ ಭ್ರಷ್ಟಾಚಾರ ಮಾಡಿ ರೂಢಿ ಇರುವ ಕಾಂಗ್ರೆಸ್, ವಿನಾ ಕಾರಣ ಆರೋಪ ಮಾಡುತ್ತಿದೆ’ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>