ಸುತ್ತೂರು ಮಠದಲ್ಲಿ ಶನಿವಾರ ಸಂಜೆ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಡೀ ಜಗತ್ತಿನಲ್ಲೇ ಭಾರತದ ಕೋವಿಡ್ ಲಸಿಕೆ ಕಾರ್ಯಕ್ರಮ ಅತ್ಯಂತ ದೊಡ್ಡದು. ಈವರೆಗೆ 35 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಜುಲೈನಲ್ಲಿ 12 ಕೋಟಿ ಜನರಿಗೆ ಲಸಿಕೆ ನೀಡುವುದಾಗಿ ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದಾರೆ. 15 ದಿನಗಳ ಬಳಿಕ ರಾಹುಲ್ ಗಾಂಧಿ ಮಾತನಾಡಲಿ’ ಎಂದು ಸಲಹೆ ನೀಡಿದರು.