<p><strong>ಉಡುಪಿ</strong>: ನೌಕಾಪಡೆಯ ಐಎನ್ಎಸ್ ಕೊಚ್ಚಿನ್ ಹಡಗು ಡಿಕ್ಕಿ ಹೊಡೆದು ಸುವರ್ಣ ತ್ರಿಭುಜ ಬೋಟ್ ಸಮುದ್ರದಲ್ಲಿ ಮುಳುಗಿದೆ. ನೌಕಾದಳ ಮೀನುಗಾರರ ಕಗ್ಗೊಲೆ ನಡೆಸಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ ಮಾಡಿದರು.</p>.<p>ಕಾಪುವಿನ ಮೂಳೂರಿನಲ್ಲಿರುವ ಸಾಯಿರಾಧಾ ರೆಸಾರ್ಟ್ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.</p>.<p>ಲೋಕಸಭಾ ಚುನಾವಣೆ ಮುಗಿದ ಬಳಿಕ ಉಡುಪಿ ಶಾಸಕರ ನೇತೃತ್ವದಲ್ಲಿ ಬೋಟ್ ಹುಡುಕುವ ನಾಟಕ ಮಾಡಿದ್ದು ಖಂಡನೀಯ. ಮೀನುಗಾರರ ಹೆಣದ ಮೇಲಿನ ರಾಜಕೀಯವನ್ನು ಖಂಡಿಸುತ್ತೇನೆ ಎಂದರು.</p>.<p>ಕೇಂದ್ರ ಸರ್ಕಾರ ಹಾಗೂ ನೌಕಾಪಡೆಯಿಂದ ಆಗಿರುವ ತಪ್ಪಿಗೆ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಹೀಯಾಳಿಸಿದ್ದ ಬಿಜೆಪಿ ಈಗ ಸಂಪೂರ್ಣ ಬೆತ್ತಲಾಗಿದೆ. ಮೀನುಗಾರರಿಗೆ ಭದ್ರತೆ ಕೊಡಬೇಕಾಗಿದ್ದ ನೌಕಾದಳ ತಪ್ಪೆಸಗಿರುವುದು ಖಂಡನೀಯ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಒಸತ್ತಾಯಿಸಿದರು. </p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/no-chances-survival-fishermen-633802.html" target="_blank">ಮೀನುಗಾರರು ಬದುಕುಳಿಯುವ ಯಾವುದೇ ಅವಕಾಶಗಳಿಲ್ಲ: ರಘುಪತಿ ಭಟ್</a></strong></p>.<p>ಈಗಾಗಲೇ ಮೀನುಗಾರ ಸಮುದಾಯದ ಮುಖಂಡರಾದ ಜಿ.ಶಂಕರ್ ಅವರನ್ನೊಳಗೊಂಡ ನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದೆ. ಮೀನುಗಾರರು ಬದುಕುಳಿದಿರುವ ಆಶಾಭಾವ ಉಳಿದಿಲ್ಲ. ಮೃತಪಟ್ಟ ಮೀನುಗಾರರ ಕುಟುಂಬಗಳಿಗೆ ಕನಿಷ್ಠ 10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದೇವೆ ಎಂದರು.</p>.<p>ಮುಖ್ಯಮಂತ್ರಿಗಳು ಈಗಾಗಲೇ ಮೀನುಗಾರಿಕಾ ಸಚಿವರೊಂದಿಗೆ ಚರ್ಚಿಸಿದ್ದು ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ ಎಂದು ಪ್ರಮೋದ್ ಮಧ್ವರಾಜ್ ತಿಳಿಸಿದರು.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/udupi-boat-malpe-capsizes-633763.html" target="_blank">ಮಲ್ಪೆಯಿಂದ ನಾಪತ್ತೆಯಾಗಿದ್ದ ಮೀನುಗಾರಿಕಾ ದೋಣಿಯ ಅವಶೇಷ ಪತ್ತೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ನೌಕಾಪಡೆಯ ಐಎನ್ಎಸ್ ಕೊಚ್ಚಿನ್ ಹಡಗು ಡಿಕ್ಕಿ ಹೊಡೆದು ಸುವರ್ಣ ತ್ರಿಭುಜ ಬೋಟ್ ಸಮುದ್ರದಲ್ಲಿ ಮುಳುಗಿದೆ. ನೌಕಾದಳ ಮೀನುಗಾರರ ಕಗ್ಗೊಲೆ ನಡೆಸಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ ಮಾಡಿದರು.</p>.<p>ಕಾಪುವಿನ ಮೂಳೂರಿನಲ್ಲಿರುವ ಸಾಯಿರಾಧಾ ರೆಸಾರ್ಟ್ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.</p>.<p>ಲೋಕಸಭಾ ಚುನಾವಣೆ ಮುಗಿದ ಬಳಿಕ ಉಡುಪಿ ಶಾಸಕರ ನೇತೃತ್ವದಲ್ಲಿ ಬೋಟ್ ಹುಡುಕುವ ನಾಟಕ ಮಾಡಿದ್ದು ಖಂಡನೀಯ. ಮೀನುಗಾರರ ಹೆಣದ ಮೇಲಿನ ರಾಜಕೀಯವನ್ನು ಖಂಡಿಸುತ್ತೇನೆ ಎಂದರು.</p>.<p>ಕೇಂದ್ರ ಸರ್ಕಾರ ಹಾಗೂ ನೌಕಾಪಡೆಯಿಂದ ಆಗಿರುವ ತಪ್ಪಿಗೆ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಹೀಯಾಳಿಸಿದ್ದ ಬಿಜೆಪಿ ಈಗ ಸಂಪೂರ್ಣ ಬೆತ್ತಲಾಗಿದೆ. ಮೀನುಗಾರರಿಗೆ ಭದ್ರತೆ ಕೊಡಬೇಕಾಗಿದ್ದ ನೌಕಾದಳ ತಪ್ಪೆಸಗಿರುವುದು ಖಂಡನೀಯ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಒಸತ್ತಾಯಿಸಿದರು. </p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/no-chances-survival-fishermen-633802.html" target="_blank">ಮೀನುಗಾರರು ಬದುಕುಳಿಯುವ ಯಾವುದೇ ಅವಕಾಶಗಳಿಲ್ಲ: ರಘುಪತಿ ಭಟ್</a></strong></p>.<p>ಈಗಾಗಲೇ ಮೀನುಗಾರ ಸಮುದಾಯದ ಮುಖಂಡರಾದ ಜಿ.ಶಂಕರ್ ಅವರನ್ನೊಳಗೊಂಡ ನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದೆ. ಮೀನುಗಾರರು ಬದುಕುಳಿದಿರುವ ಆಶಾಭಾವ ಉಳಿದಿಲ್ಲ. ಮೃತಪಟ್ಟ ಮೀನುಗಾರರ ಕುಟುಂಬಗಳಿಗೆ ಕನಿಷ್ಠ 10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದೇವೆ ಎಂದರು.</p>.<p>ಮುಖ್ಯಮಂತ್ರಿಗಳು ಈಗಾಗಲೇ ಮೀನುಗಾರಿಕಾ ಸಚಿವರೊಂದಿಗೆ ಚರ್ಚಿಸಿದ್ದು ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ ಎಂದು ಪ್ರಮೋದ್ ಮಧ್ವರಾಜ್ ತಿಳಿಸಿದರು.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/udupi-boat-malpe-capsizes-633763.html" target="_blank">ಮಲ್ಪೆಯಿಂದ ನಾಪತ್ತೆಯಾಗಿದ್ದ ಮೀನುಗಾರಿಕಾ ದೋಣಿಯ ಅವಶೇಷ ಪತ್ತೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>