ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಸಾದ್ ರಕ್ಷಿದಿಗೆ ವತ್ಸಲಾದೇವಿ ಪ್ರಶಸ್ತಿ

Last Updated 29 ಜೂನ್ 2018, 18:41 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ರಂಗಸಾಧಕ ಪ್ರಸಾದ್ ರಕ್ಷಿದಿ ಅವರು ‘ಡಾ.ಸಿ.ವಿ ವತ್ಸಲಾದೇವಿ ಸ್ಮಾರಕ ಪ್ರಶಸ್ತಿ’ಗೆ ಆಯ್ಕೆ ಆಗಿದ್ದಾರೆ.

ರಂಗಭೂಮಿ ಚಟುವಟಿಕೆಗಳ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸಮಾಜಸೇವೆಗೆ ಅವರು ಹೆಸರಾಗಿದ್ದಾರೆ. ‘ಸಿರಿಮನೆ ಪ್ರತಿಷ್ಠಾನ’ ನೀಡುವ ಪ್ರಶಸ್ತಿಯು ₹ 25 ಸಾವಿರ ನಗದು ಬಹುಮಾನವನ್ನು ಒಳಗೊಂಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ 9ರಂದು ಬೆಂಗಳೂರಿನ ಸಾಹಿತ್ಯ ಪರಿಷತ್ತಿನಲ್ಲಿ ನಡೆಯಲಿದೆ.

‘ಪ್ರಸಾದ್ ರಕ್ಷಿದಿ ಅವರು ಹಾಸನಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಅವರು ಸ್ಥಾಪಿಸಿದ ’ಜೈ ಕರ್ನಾಟಕ ಸಂಘ ಬೆಳ್ಳೇಕೆರೆ’ ಸಂಸ್ಥೆ, ಆಸುಪಾಸಿನ ಹಳ್ಳಿಗಳ ಮಕ್ಕಳಿಗೆ ಹಾಗೂ ಕಾಯಕ ಜೀವಿಗಳಿಗೆ ಅಭಿವ್ಯಕ್ತಿಯ ಹೊಸಬಗೆಯನ್ನು ಪರಿಚಯಿಸಿತು’ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಸಿ.ವೀರಣ್ಣ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT