<p><strong>ಬೆಂಗಳೂರು</strong>: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ಸಂಪೂರ್ಣವಾಗಿ ತನ್ನ ಹಿಡಿತದಲ್ಲಿ ಇಟ್ಟುಕೊಂಡಿದ್ದು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಮುಂದಿನ ಗುರಿ ಕರ್ನಾಟಕ’ ಎಂದು ಸುಪ್ರೀಂಕೋರ್ಟ್ನ ವಕೀಲ ಪ್ರಶಾಂತ್ ಭೂಷಣ್ ಹೇಳಿದರು.</p>.<p>ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಭಾನುವಾರ ನಗರದಲ್ಲಿ ಆಯೋಜಿಸಿದ್ದ ‘ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಮತ್ತು ಎಸ್ಐಆರ್’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>‘ಚುನಾವಣಾ ಆಯೋಗವನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಂಡು ಪಶ್ಚಿಮ ಬಂಗಾಳದಲ್ಲಿ ವ್ಯವಸ್ಥಿತವಾಗಿ ವಿಶೇಷ ಸಮಗ್ರ ಪರಿಷ್ಕರಣೆ ಜಾರಿಗೆ ತಂದಿತು. ಸುಪ್ರೀಂಕೋರ್ಟ್ ನಿರ್ದೇಶನದ ನಂತರವೂ ಹೆಚ್ಚು ಬದಲಾವಣೆಯಾಗದೇ ಹೆಚ್ಚಿನ ಮಂದಿ ಮತದಾರರ ಪಟ್ಟಿ ಯಿಂದ ಹೊರಗುಳಿದರು. ಇದರಿಂದಾಗಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯುವ ಬಿಜೆಪಿ ಕನಸು ಈಡೇರಿದೆ. ಮುಂದಿನ ಗುರಿ ಕರ್ನಾಟಕ ಹಾಗೂ ಕೇರಳ. ಇಲ್ಲಿ ಅಧಿಕಾರ ಹಿಡಿಯಲು ಎಸ್ಐಆರ್ ಅನ್ನು ಬಳಸಿಕೊಳ್ಳಲಿದ್ದಾರೆ’ ಎಂದು ಹೇಳಿದರು.</p>.<p>‘ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬಿಜೆಪಿಯ ಏಜೆಂಟರಂತೆ ಕೆಲಸ ಮಾಡಿದರು. ಬಂಗಾಳದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಜವಾಬ್ದಾರಿ ಹೊತ್ತಿದ್ದ ಅಧಿಕಾರಿಯೊಬ್ಬರು ಅಲ್ಲಿನ ಮುಖ್ಯಮಂತ್ರಿಯ ವಿಶೇಷ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಚುನಾವಣಾ ವ್ಯವಸ್ಥೆಯನ್ನೇ ಹೈಜಾಕ್ ಮಾಡಿ ಬಿಜೆಪಿ ಅಧಿಕಾರ ಹಿಡಿಯುತ್ತಿರುವ ಮಾದರಿ ನೋಡಿದರೆ ನಮ್ಮಲ್ಲಿ ಪ್ರಜಾಪ್ರಭುತ್ವ ಅಂತ್ಯವಾಗುತ್ತಿದೆಯೇ ಎನ್ನುವ ಆತಂಕ ಎದುರಾಗಿದೆ’ ಎಂದರು.</p>.<p>‘ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ರಾಷ್ಟ್ರೀಯ ಪೌರತ್ವ ನೋಂದಣಿಗೆ (ಎನ್ಆರ್ಸಿ) ಕೇಂದ್ರ ಸರ್ಕಾರ ಮುಂದಾಯಿತು. ಇದರಲ್ಲಿ ಯಶಸ್ಸು ಸಿಗದೇ ವಿಶೇಷ ಸಮಗ್ರ ಪರಿಷ್ಕರಣೆಗೆ ಮಾರ್ಗ ಬದಲಿಸಿತು. ಮೊದಲು ಇದನ್ನು ಬಿಹಾರದಲ್ಲಿ ಜಾರಿಗೊಳಿಸಲಾಯಿತು. ಸುಪ್ರೀಂಕೋರ್ಟ್ ಸೂಚನೆ ನಂತರ 11 ದಾಖಲೆಗಳ ಪಟ್ಟಿಯಲ್ಲಿ ಆಧಾರ್ ಕಾರ್ಡ್ ಸೇರಿಸಿದ್ದರಿಂದಾಗಿ ಅಲ್ಲಿ ಹೆಚ್ಚಿನ ತೊಂದರೆಯಾಗಲಿಲ್ಲ’ ಎಂದರು. </p>.<p>ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ನ ಸುಧೀರ್ಕುಮಾರ್ ಮುರೊಳ್ಳಿ, ಸಾಮಾಜಿಕ ಹೋರಾಟಗಾರ್ತಿ ಕೆ.ಎಸ್.ವಿಮಲಾ ಉಪಸ್ಥಿತರಿದ್ದರು.</p>.<p><strong>‘ಕ್ಷೇತ್ರ ಪುನರ್ ವಿಂಗಡಣೆ: ಎಚ್ಚರ ಇರಲಿ’</strong></p><p>‘ಅಸ್ಸಾಂನಲ್ಲಿ ಧರ್ಮದ ಆಧಾರದ ಮೇಲೆ ಗಡಿ ಗುರುತಿಸಿ ಮೂರು ಕ್ಷೇತ್ರಗಳ ಪೈಕಿ ಎರಡನ್ನು ಗೆಲ್ಲುವ ರೀತಿ ಜಾರಿಗೊಳಿಸುವಲ್ಲಿ ಬಿಜೆಪಿ ಯಶಸ್ವಿ ಆಗಿದೆ. ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು’ ಎಂದು ಪ್ರಶಾಂತ್ ಭೂಷಣ್ ಹೇಳಿದರು. ‘ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡುವ ಪ್ರಯತ್ನ ನಡೆದಿದೆ. ಇದರಿಂದ ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಿ ಉತ್ತರ ಭಾರತದ ಕ್ಷೇತ್ರಗಳು ಹೆಚ್ಚಲಿವೆ. ಈ ಮೂಲಕ ಸುಲಭವಾಗಿ ಅಧಿಕಾರ ಹಿಡಿಯುವ ಪ್ರಯತ್ನ ನಡೆದಿದೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ಸಂಪೂರ್ಣವಾಗಿ ತನ್ನ ಹಿಡಿತದಲ್ಲಿ ಇಟ್ಟುಕೊಂಡಿದ್ದು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಮುಂದಿನ ಗುರಿ ಕರ್ನಾಟಕ’ ಎಂದು ಸುಪ್ರೀಂಕೋರ್ಟ್ನ ವಕೀಲ ಪ್ರಶಾಂತ್ ಭೂಷಣ್ ಹೇಳಿದರು.</p>.<p>ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಭಾನುವಾರ ನಗರದಲ್ಲಿ ಆಯೋಜಿಸಿದ್ದ ‘ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಮತ್ತು ಎಸ್ಐಆರ್’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>‘ಚುನಾವಣಾ ಆಯೋಗವನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಂಡು ಪಶ್ಚಿಮ ಬಂಗಾಳದಲ್ಲಿ ವ್ಯವಸ್ಥಿತವಾಗಿ ವಿಶೇಷ ಸಮಗ್ರ ಪರಿಷ್ಕರಣೆ ಜಾರಿಗೆ ತಂದಿತು. ಸುಪ್ರೀಂಕೋರ್ಟ್ ನಿರ್ದೇಶನದ ನಂತರವೂ ಹೆಚ್ಚು ಬದಲಾವಣೆಯಾಗದೇ ಹೆಚ್ಚಿನ ಮಂದಿ ಮತದಾರರ ಪಟ್ಟಿ ಯಿಂದ ಹೊರಗುಳಿದರು. ಇದರಿಂದಾಗಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯುವ ಬಿಜೆಪಿ ಕನಸು ಈಡೇರಿದೆ. ಮುಂದಿನ ಗುರಿ ಕರ್ನಾಟಕ ಹಾಗೂ ಕೇರಳ. ಇಲ್ಲಿ ಅಧಿಕಾರ ಹಿಡಿಯಲು ಎಸ್ಐಆರ್ ಅನ್ನು ಬಳಸಿಕೊಳ್ಳಲಿದ್ದಾರೆ’ ಎಂದು ಹೇಳಿದರು.</p>.<p>‘ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬಿಜೆಪಿಯ ಏಜೆಂಟರಂತೆ ಕೆಲಸ ಮಾಡಿದರು. ಬಂಗಾಳದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಜವಾಬ್ದಾರಿ ಹೊತ್ತಿದ್ದ ಅಧಿಕಾರಿಯೊಬ್ಬರು ಅಲ್ಲಿನ ಮುಖ್ಯಮಂತ್ರಿಯ ವಿಶೇಷ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಚುನಾವಣಾ ವ್ಯವಸ್ಥೆಯನ್ನೇ ಹೈಜಾಕ್ ಮಾಡಿ ಬಿಜೆಪಿ ಅಧಿಕಾರ ಹಿಡಿಯುತ್ತಿರುವ ಮಾದರಿ ನೋಡಿದರೆ ನಮ್ಮಲ್ಲಿ ಪ್ರಜಾಪ್ರಭುತ್ವ ಅಂತ್ಯವಾಗುತ್ತಿದೆಯೇ ಎನ್ನುವ ಆತಂಕ ಎದುರಾಗಿದೆ’ ಎಂದರು.</p>.<p>‘ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ರಾಷ್ಟ್ರೀಯ ಪೌರತ್ವ ನೋಂದಣಿಗೆ (ಎನ್ಆರ್ಸಿ) ಕೇಂದ್ರ ಸರ್ಕಾರ ಮುಂದಾಯಿತು. ಇದರಲ್ಲಿ ಯಶಸ್ಸು ಸಿಗದೇ ವಿಶೇಷ ಸಮಗ್ರ ಪರಿಷ್ಕರಣೆಗೆ ಮಾರ್ಗ ಬದಲಿಸಿತು. ಮೊದಲು ಇದನ್ನು ಬಿಹಾರದಲ್ಲಿ ಜಾರಿಗೊಳಿಸಲಾಯಿತು. ಸುಪ್ರೀಂಕೋರ್ಟ್ ಸೂಚನೆ ನಂತರ 11 ದಾಖಲೆಗಳ ಪಟ್ಟಿಯಲ್ಲಿ ಆಧಾರ್ ಕಾರ್ಡ್ ಸೇರಿಸಿದ್ದರಿಂದಾಗಿ ಅಲ್ಲಿ ಹೆಚ್ಚಿನ ತೊಂದರೆಯಾಗಲಿಲ್ಲ’ ಎಂದರು. </p>.<p>ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ನ ಸುಧೀರ್ಕುಮಾರ್ ಮುರೊಳ್ಳಿ, ಸಾಮಾಜಿಕ ಹೋರಾಟಗಾರ್ತಿ ಕೆ.ಎಸ್.ವಿಮಲಾ ಉಪಸ್ಥಿತರಿದ್ದರು.</p>.<p><strong>‘ಕ್ಷೇತ್ರ ಪುನರ್ ವಿಂಗಡಣೆ: ಎಚ್ಚರ ಇರಲಿ’</strong></p><p>‘ಅಸ್ಸಾಂನಲ್ಲಿ ಧರ್ಮದ ಆಧಾರದ ಮೇಲೆ ಗಡಿ ಗುರುತಿಸಿ ಮೂರು ಕ್ಷೇತ್ರಗಳ ಪೈಕಿ ಎರಡನ್ನು ಗೆಲ್ಲುವ ರೀತಿ ಜಾರಿಗೊಳಿಸುವಲ್ಲಿ ಬಿಜೆಪಿ ಯಶಸ್ವಿ ಆಗಿದೆ. ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು’ ಎಂದು ಪ್ರಶಾಂತ್ ಭೂಷಣ್ ಹೇಳಿದರು. ‘ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡುವ ಪ್ರಯತ್ನ ನಡೆದಿದೆ. ಇದರಿಂದ ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಿ ಉತ್ತರ ಭಾರತದ ಕ್ಷೇತ್ರಗಳು ಹೆಚ್ಚಲಿವೆ. ಈ ಮೂಲಕ ಸುಲಭವಾಗಿ ಅಧಿಕಾರ ಹಿಡಿಯುವ ಪ್ರಯತ್ನ ನಡೆದಿದೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>