ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಳ್ಮೆ ಕಳೆದುಕೊಂಡ ಪ್ರತಾಪಸಿಂಹ

Last Updated 5 ಏಪ್ರಿಲ್ 2019, 19:42 IST
ಅಕ್ಷರ ಗಾತ್ರ

ಮೈಸೂರು: ಖಾಸಗಿ ಸುದ್ದಿ ವಾಹಿನಿ ಶುಕ್ರವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪಸಿಂಹ ಅವರು ತಾಳ್ಮೆ ಕಳೆದುಕೊಂಡು ಕಾಂಗ್ರೆಸ್‌ ಕಾರ್ಯಕರ್ತನ ವಿರುದ್ಧ ರೇಗಾಡಿದ್ದಾರೆ.

ಸಂವಾದದಲ್ಲಿ ಪ್ರತಾಪಸಿಂಹ ಅಲ್ಲದೆ ಕಾಂಗ್ರೆಸ್‌, ಬಿಎಸ್‌ಪಿ ಪಕ್ಷಗಳ ಪ್ರತಿನಿಧಿಗಳು ಇದ್ದರು. ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು, ‘ಬಿಜೆಪಿಯವರು ಹಿಂದುತ್ವ.. ಹಿಂದುತ್ವ ಎನ್ನುತ್ತಾರೆ. ಹಿಂದುತ್ವವನ್ನು ನೀವು ಗುತ್ತಿಗೆ ತೆಗೆದುಕೊಂಡಿದ್ದೀರಾ, ಅದು ನಿಮ್ಮ ಅಪ್ಪನ ಮನೆ ಆಸ್ತಿನಾ’ ಎಂದು ಪ್ರಶ್ನಿಸಿದ್ದಾರೆ.

ಇದರಿಂದ ಕೋಪಗೊಂಡ ಸಂಸದರು ವೇದಿಕೆಯಿಂದ ಕೆಳಗಿಳಿದು ಬಂದು ಆ ಕಾರ್ಯಕರ್ತನನ್ನು ತರಾಟೆಗೆ ತೆಗೆದುಕೊಂಡರು. ಸ್ಥಳದಲ್ಲಿದ್ದ ಪೊಲೀಸರು ಮತ್ತು ಇತರ ಕಾರ್ಯಕರ್ತರು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಾಪಸಿಂಹ ಪರ ಹಾಗೂ ವಿರೋಧ ಘೋಷಣೆ ಕೂಗಿದ್ದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT