<p><strong>ಮಡಿಕೇರಿ: </strong>‘ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ. ಅದರಲ್ಲಿ ನೀತಿಪಾಠ ಹಾಗೂ ನೈತಿಕ ವಿಚಾರಗಳಿದ್ದು, ಪಠ್ಯ ಪುಸ್ತಕಗಳಲ್ಲಿ ಸೇರಿಸುವುದು ಸೂಕ್ತವಾಗಿದೆ’ ಎಂದು ಸಂಸದ ಪ್ರತಾಪ ಸಿಂಹ ಇಲ್ಲಿ ಪ್ರತಿಪಾದಿಸಿದರು.<br /><br />ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸರಿ, ತಪ್ಪುಗಳ ಕುರಿತು ಭಗವದ್ಗೀತೆಯಲ್ಲಿ ತಿಳಿಸಲಾಗಿದೆ. ಕುರಾನ್, ಬೈಬಲ್ ಧಾರ್ಮಿಕ ಗ್ರಂಥಗಳು. ಭಗವದ್ಗೀತೆ ಧರ್ಮದ ಬಗ್ಗೆ ತಿಳಿಸುವುದಿಲ್ಲ. ಇದನ್ನು ಬೇರೆ ಗ್ರಂಥಗಳಂತೆ ನೋಡಲು ಹೋಗುವುದು ಬೇಡ’ ಎಂದರು.<br /><br />‘ಹಿಂದೂ - ಮುಸ್ಲಿಂ ಒಗ್ಗಟ್ಟಿನಿಂದ ಸಾಗಲು ಸಾಧ್ಯವಿಲ್ಲವೆಂದು ಡಾ.ಬಿ.ಆರ್.ಅಂಬೇಡ್ಕರ್ ಅಂದೇ ಹೇಳಿದ್ದರು. ಅಂಬೇಡ್ಕರ್ ಅವರಿಗೆ ಅಂದೇ ಅರ್ಥವಾಗಿದ್ದರೆ, ನಮಗೀಗ ತಿಳಿಯುತ್ತಿದೆ’ ಎಂದು ಹೇಳಿದರು.<br /><br />‘ಅಯೋಧ್ಯೆ ವಿಚಾರದಲ್ಲಿ ಮುಸ್ಲಿಮರು ಪದೇಪದೇ ನ್ಯಾಯಾಲಯ ಎಂದು ಹೇಳುತ್ತಿದ್ದರು. ಕೋರ್ಟ್ ತೀರ್ಪು ಬಂದ ಬಳಿಕ ರಾಮಮಂದಿರ ನಿರ್ಮಿಸುತ್ತಿದ್ದೇವೆ. ಈಗ ಹಿಜಾಬ್ ಸಂಬಂಧ ನ್ಯಾಯಾಲಯದ ತೀರ್ಪು ಪ್ರಶ್ನಿಸುತ್ತಿದ್ದಾರೆ. ಅವರಿಗೆ ದೇಶಕ್ಕಿಂತ ಧರ್ಮವೇ ಮುಖ್ಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>‘ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ. ಅದರಲ್ಲಿ ನೀತಿಪಾಠ ಹಾಗೂ ನೈತಿಕ ವಿಚಾರಗಳಿದ್ದು, ಪಠ್ಯ ಪುಸ್ತಕಗಳಲ್ಲಿ ಸೇರಿಸುವುದು ಸೂಕ್ತವಾಗಿದೆ’ ಎಂದು ಸಂಸದ ಪ್ರತಾಪ ಸಿಂಹ ಇಲ್ಲಿ ಪ್ರತಿಪಾದಿಸಿದರು.<br /><br />ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸರಿ, ತಪ್ಪುಗಳ ಕುರಿತು ಭಗವದ್ಗೀತೆಯಲ್ಲಿ ತಿಳಿಸಲಾಗಿದೆ. ಕುರಾನ್, ಬೈಬಲ್ ಧಾರ್ಮಿಕ ಗ್ರಂಥಗಳು. ಭಗವದ್ಗೀತೆ ಧರ್ಮದ ಬಗ್ಗೆ ತಿಳಿಸುವುದಿಲ್ಲ. ಇದನ್ನು ಬೇರೆ ಗ್ರಂಥಗಳಂತೆ ನೋಡಲು ಹೋಗುವುದು ಬೇಡ’ ಎಂದರು.<br /><br />‘ಹಿಂದೂ - ಮುಸ್ಲಿಂ ಒಗ್ಗಟ್ಟಿನಿಂದ ಸಾಗಲು ಸಾಧ್ಯವಿಲ್ಲವೆಂದು ಡಾ.ಬಿ.ಆರ್.ಅಂಬೇಡ್ಕರ್ ಅಂದೇ ಹೇಳಿದ್ದರು. ಅಂಬೇಡ್ಕರ್ ಅವರಿಗೆ ಅಂದೇ ಅರ್ಥವಾಗಿದ್ದರೆ, ನಮಗೀಗ ತಿಳಿಯುತ್ತಿದೆ’ ಎಂದು ಹೇಳಿದರು.<br /><br />‘ಅಯೋಧ್ಯೆ ವಿಚಾರದಲ್ಲಿ ಮುಸ್ಲಿಮರು ಪದೇಪದೇ ನ್ಯಾಯಾಲಯ ಎಂದು ಹೇಳುತ್ತಿದ್ದರು. ಕೋರ್ಟ್ ತೀರ್ಪು ಬಂದ ಬಳಿಕ ರಾಮಮಂದಿರ ನಿರ್ಮಿಸುತ್ತಿದ್ದೇವೆ. ಈಗ ಹಿಜಾಬ್ ಸಂಬಂಧ ನ್ಯಾಯಾಲಯದ ತೀರ್ಪು ಪ್ರಶ್ನಿಸುತ್ತಿದ್ದಾರೆ. ಅವರಿಗೆ ದೇಶಕ್ಕಿಂತ ಧರ್ಮವೇ ಮುಖ್ಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>