ಮೈಸೂರು: ‘ಕೋವಿಡ್ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಬಿಟ್ಟುಕೊಟ್ಟರು. ಆದರೆ, ನಂತರ ಬಂದವರು ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದುಕೊಳ್ಳಲಿಲ್ಲ. ಹರ್ಷ ಹಾಗೂ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಗಳಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿಲ್ಲ‘ ಎಂದು ಸಂಸದ ಪ್ರತಾಪಸಿಂಹ, ತಮ್ಮದೇ ಪಕ್ಷದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪರೋಕ್ಷವಾಗಿ ಕಿಡಿಕಾಡಿದರು.