ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೊಮ್ಮಾಯಿ ಕುರಿತು ಪ್ರತಾಪ ಸಿಂಹ ಪರೋಕ್ಷ ಟೀಕೆ

Published 16 ಜೂನ್ 2023, 17:19 IST
Last Updated 16 ಜೂನ್ 2023, 17:19 IST
ಅಕ್ಷರ ಗಾತ್ರ

ಮೈಸೂರು: ‘ಕೋವಿಡ್‌ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿ ಬಿ.ಎಸ್‌.ಯಡಿಯೂರಪ್ಪ ಅಧಿಕಾರ ಬಿಟ್ಟುಕೊಟ್ಟರು. ಆದರೆ, ನಂತರ ಬಂದವರು ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದುಕೊಳ್ಳಲಿಲ್ಲ. ಹರ್ಷ ಹಾಗೂ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಗಳಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿಲ್ಲ‘ ಎಂದು ಸಂಸದ ಪ್ರತಾಪಸಿಂಹ, ತಮ್ಮದೇ ಪಕ್ಷದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪರೋಕ್ಷವಾಗಿ ಕಿಡಿಕಾಡಿದರು.‌

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2018ರ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವ ಹಾಗೂ ಕಾರ್ಯಕರ್ತರ ಛಲದಿಂದ ಪಕ್ಷವು 104 ಸ್ಥಾನಗಳನ್ನು ಗೆದ್ದಿತ್ತು. ಒಂದು ವರ್ಷದ ನಂತರ ಅಧಿಕಾರಕ್ಕೆ ಬಂದಿತ್ತು. ಯಡಿಯೂರಪ್ಪ ನಂತರ ಚುಕ್ಕಾಣಿ ಹಿಡಿದವರಿಗೆ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಬೇಕೆನ್ನುವ ಛಲವಿರಲಿಲ್ಲ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT