‘ಕೆಎಂಎಫ್–ಅಮೂಲ್ ವಿಲೀನ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ನವರು ಸುಳ್ಳು ಆರೋಪವನ್ನೇ ಪುನರಾವರ್ತನೆ ಮಾಡುತ್ತಿದ್ದಾರೆ. ಆಗ, ಹಿಂದಿ ಹೇರಿಕೆ ಅಂದರು. ಈಗ ಅಮುಲ್ ಹೇರಿಕೆ ಎಂಬ ಅಪ್ರಪಚಾರ ಮಾಡುತ್ತಿದ್ದಾರೆ. ಹಾಲಿನ ಉತ್ಪನ್ನಗಳ ಬ್ರಾಂಡ್ಗಳು ‘ನಂದಿನಿ’ಯ ಅಕ್ಕ–ತಂಗಿಯರಾ ಅಥವಾ ತಮಿಳುನಾಡು ಮತ್ತು ಆಂಧ್ರದಿಂದ ಬಂದ ಸೊಸೆ–ಅಳಿಯಂದಿರಾ? ಇಷ್ಟು ವರ್ಷದಿಂದ ಈ ಬ್ರಾಂಡ್ಗಳು ಕರ್ನಾಟಕದಲ್ಲಿ ಮಾರಾಟ ಆಗುತ್ತಿಲ್ಲವೇ? ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಇವು ರಾಜ್ಯಕ್ಕೆ ಬಂದವಾ’ ಎಂದು ಪ್ರಶ್ನಿಸಿದರು.