ರಾಮನಗರ: ಇಲ್ಲಿನ ಜಾನಪದ ಲೋಕದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಜಾನಪದ ಹಬ್ಬ. 'ಪ್ರವಾಸಿ ಜಾನಪದ ಲೋಕೋತ್ಸವ ' ಕಾರ್ಯಕ್ರಮದ ಅಂಗವಾಗಿ ನಾಡಿನ ಜಾನಪದ ಕಲಾವಿದರೆಲ್ಲ ಒಗ್ಗೂಡಿದ್ದು, ಕಂಸಾಳೆ, ಡೊಳ್ಳು, ಪೂಜಾ ಕುಣಿತ, ಪಟ ಕುಣಿತ ಸೇರಿದಂತೆ ವಿವಿಧ ಪ್ರಕಾರಗಳ ಕಲಾ ಪ್ರದರ್ಶನ ಇಲ್ಲಿ ನಡೆದಿದೆ.
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮೊದಲಾದ ಹೊರರಾಜ್ಯಗಳ ನೂರಕ್ಕೂ ಹೆಚ್ಚು ಕಲಾವಿದರೂ ಸಹ ಭಾಗಿ ಆಗಿದ್ದಾರೆ. ಶುಕ್ರವಾರ ಬೆಳಗ್ಗೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಲೋಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶನಿವಾರ ಸಂಜೆ ಇದೇ ವೇದಿಕೆಯಲ್ಲಿ ನಾಡಿನ 32 ಕಲಾವಿದರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಭಾನುವಾರ ಇಡೀ ದಿನ ಕಲಾ ಪ್ರದರ್ಶನ ಇರಲಿದೆ.