‘ಪ್ರವೀಣ್ ನೆಟ್ಟಾರು ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಮೂವರೂ ಆರೋಪಿಗಳು ಭೌತಿಕವಾಗಿ ಹಾಜರಿರಲಿಲ್ಲ ನಿಜ. ಆದರೆ, ಅವರ ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಪಿತೂರಿ ಸಭೆಯಲ್ಲಿ ಭಾಗವಹಿಸಿದ್ದರು ಮತ್ತು ಹತ್ಯೆಯಲ್ಲಿ ಸಕ್ರಿಯ ಪಾತ್ರ ವಹಿಸಿರುವುದನ್ನು ಸಾಬೀತುಪಡಿಸಲು ಸೂಕ್ತ ಸಾಕ್ಷ್ಯಧಾರಗಳಿವೆ‘ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ಮೇಲ್ಮನವಿ ತಿರಸ್ಕರಿಸಿದೆ. ಮೇಲ್ಮನವಿದಾರರ ಪರ ಮೊಹಮದ್ ತಾಹಿರ್ ಮತ್ತು ಪ್ರಾಸಿಕ್ಯೂಷನ್ ಪರ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.