ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇಲ್ಲಿನ ನಾಗರಬಾವಿ ಬಳಿಯ ಹೋಟೆಲ್ ಹಾಗೂ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಮೂವರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.
ಸೈಯದ್ ಇರ್ಫಾನ್, ಅಲ್ತಾಫ್ ಹುಸೇನ್ ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಹೆಸರು ತಿಳಿದುಬಂದಿಲ್ಲ. ಮೂವರನ್ನು ಮಂಗಳೂರಿಗೆ ತನಿಖಾಧಿಕಾರಿಗಳು ಕರೆದೊಯ್ದಿದ್ದಾರೆ. ಮೊಬೈಲ್ ಲೊಕೇಷನ್ ಆಧರಿಸಿ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.