ವೈಮಾಂತರಿಕ್ಷ ಹಾಗೂ ರಕ್ಷಣಾ ಔದ್ಯಮಿಕ ಕ್ಷೇತ್ರದ ಬೆಳವಣಿಗೆಗಳಿಗೆ ಕೈಗೊಳ್ಳಬೇಕಾಗಿರುವ ಉಪಕ್ರಮಗಳ ಕುರಿತು ಸಲಹೆ ನೀಡಲು ಸರ್ಕಾರ ರಚಿರುವ ವಿಷನ್ ಗ್ರೂಪ್ನ ಮೊದಲ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಏರ್ ಬಸ್ ಇಂಡಿಯಾದ ನಿರ್ದೇಶಕ ಕೃತ್ತಿವಾಸನ್ ಮುಖರ್ಜಿ, ಆರ್.ಟಿ.ಎಕ್ಸ್ ಕಾಲಿನ್ಸ್ ಏರೋಸ್ಪೇಸ್ ಕಂಪನಿಯ ಮುಖ್ಯಸ್ಥ ಸಮಿತ್ ರಾಯ್, ಡೈನಮಿಕ್ ಟೆಕ್ನಾಲಜೀಸ್ ಲಿಮಿಟೆಡ್ ಸಿಇಒ ಉದ್ಯಂತ್ ಮಲ್ಹೋತ್ರ, ಬೋಯಿಂಗ್ ಇಂಡಿಯಾ ಹಿರಿಯ ನಿರ್ದೇಶಕ ಅಶ್ವನಿ ಭಾರ್ಗವ ಪಾಲ್ಗೊಂಡಿದ್ದರು. ಎಚ್ಎಎಲ್ ನಿರ್ದೇಶಕ ಜಯದೇವ್ ಮತ್ತು ಸೆಂಟಮ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮುಖ್ಯಸ್ಥ ಅಪ್ಪಾರಾವ್ ವೆಂಕಟ ವಲ್ಲಾವರಪು ಅವರು ಆನ್ಲೈನ್ ಮೂಲಕ ಭಾಗವಹಿಸಿದ್ದರು.