ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆರಿಗೆ ವೇಳೆ ಮಹಿಳೆ ಸಾವು: ಸಂಬಂಧಿಕರ ಪ್ರತಿಭಟನೆ

Last Updated 6 ಮೇ 2019, 5:57 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣದ ಬಾಲು ನರ್ಸಿಂಗ್ ಹೋಮ್‌ನಲ್ಲಿ ಸೋಮವಾರ ಹೆರಿಗೆ ವೇಳೆ ದೀಕ್ಷಿತಾ (19) ಎಂಬ ಮಹಿಳೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಖಂಡಿಸಿ ಆಕೆಯ ಸಂಬಂಧಿಕರು ಆಸ್ಪತ್ರೆಯಲ್ಲಿ ದಾಂದಲೆ ನಡೆಸಿದರು.

ತಾಲ್ಲೂಕಿನ ಮಳೂರುಪಟ್ಟಣ ಗ್ರಾಮದವರಾದ ದೀಕ್ಷಿತಾ ಹೆರಿಗೆ ಸಲುವಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ಸಂದರ್ಭ ಶಸ್ತ್ರಚಿಕಿತ್ಸೆ ಕೊಠಡಿಯಲ್ಲಿಯೇ ಸಾವನ್ನಪ್ಪಿದರು. ಇದರಿಂದ ಆತಂಕಗೊಂಡ ವೈದ್ಯೆ ಶೈಲಜಾ ಹಾಗೂ ಸಿಬ್ಬಂದಿ‌ ಶವವನ್ನು ಅಲ್ಲಿಯೇ ಬಿಟ್ಟು ಆಸ್ಪತ್ರೆಯಿಂದ ಕಾಲ್ಕಿತ್ತರು. ಇದರಿಂದ ಆಕ್ರೋಶಗೊಂಡ ದೀಕ್ಷಿತಾ ಸಂಬಂಧಿಕರು ಆಸ್ಪತ್ರೆಯ ಗಾಜು ಪುಡಿಪುಡಿ ಮಾಡಿ, ಪೀಠೋಪಕರಣ ಧ್ವಂಸಗೊಳಿಸಿ ಕಟ್ಟಡದ ಮುಂಭಾಗ ಪ್ರತಿಭಟನೆ ನಡೆಸಿದರು.

ದೀಕ್ಷಿತಾಗೆ ಗಂಡು ಮಗು ಜನಿಸಿದ್ದು, ಅದಾದ ಅರ್ಧ ಗಂಟೆಯಲ್ಲಿ‌ ತಾಯಿ‌ ಸಾವನ್ನಪ್ಪಿದರು. ಸದ್ಯ‌ ಮಗು ಆರೋಗ್ಯದಿಂದ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ದೀಕ್ಷಿತಾಗೆ ಜನಿಸಿರುವ ಗಂಡು ಮಗು
ದೀಕ್ಷಿತಾಗೆ ಜನಿಸಿರುವ ಗಂಡು ಮಗು

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT