ವಿಧಾನಸಭೆ ಚುನಾವಣೆಯಲ್ಲಿ ಸೋಲುಕಂಡ ಬಳಿಕ ಕಳೆಗುಂದಿದ್ದ ಪಕ್ಷದಲ್ಲಿ ಹೊಸ ಹುರುಪು ತಂದಿರುವ ವಿಜಯೇಂದ್ರ, ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದಾರೆ. ತಮ್ಮ ವರ್ಚಸ್ಸು ಹೆಚ್ಚಿಸಿಕೊಂಡು, ಪಕ್ಷದಲ್ಲಿ ವಿಶ್ವಾಸ ತುಂಬುವ ರೀತಿಯಲ್ಲಿ ತಮ್ಮ ನೇತೃತ್ವದ ಮೊದಲ ವಿಶೇಷ ರಾಜ್ಯ ಕಾರ್ಯಕಾರಿಣಿಯನ್ನು ಶನಿವಾರ ಅವರು ನಡೆಸಿದರು.