<p><strong>ಹುಬ್ಬಳ್ಳಿ</strong>: 'ರಾಷ್ಟ್ರಪತಿ, ಪ್ರಧಾನಮಂತ್ರಿ ಅವರ ಕುರಿತು ಏಕವಚನದಲ್ಲಿ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕ ಜೀವನದ ಘನತೆ ಕಾಪಾಡಿಕೊಳ್ಳಬೇಕಿದೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸೋನಿಯಾಗಾಂಧಿ ಕುರಿತು ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಲಿ ನೋಡೋಣ. ಆನಂತರ, ಅವರು ಮುಖ್ಯಮಂತ್ರಿ ಸ್ಥಾನದಲ್ಲೇ ಇರುವುದಿಲ್ಲ' ಎಂದರು.</p><p>'ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆಯೂ ಸಿದ್ದರಾಮಯ್ಯ ಕೀಳಾಗಿ ಮಾತನಾಡಿದ್ದಾರೆ. ಅದಕ್ಕಿಂತ ಕೆಟ್ಟದಾಗಿ ಟೀಕೆ ಮಾಡಲು ನಮಗೂ ಬರುತ್ತೆ. ಆದರೆ, ಅಂತಹ ಸಂಸ್ಕೃತಿ ನಮ್ಮದಲ್ಲ. ಕೈಲಾಗದವರು ಮೈ ಪರಚಿಕೊಂಡಂತೆ, ಕುಣಿಯಲಾಗದವರು ನೆಲ ಡೊಂಕು ಎನ್ನುವ ಪರಿಸ್ಥಿತಿ ಸಿದ್ದರಾಮಯ್ಯ ಅವರದ್ದು' ಎಂದು ಹೇಳಿದರು.</p><p>'ದೇಶದಲ್ಲಿ ಉದ್ಯೋಗ ಸೃಷ್ಟಿ ಆಗುತ್ತಿದ್ದರೂ, ರಾಜ್ಯಕ್ಕೆ ಸಮರ್ಪಕವಾಗಿ ತೆರಿಗೆ ಪಾಲು ನೀಡಿದರೂ ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ. ನಿಜವಾಗಿ ಅವರಿಗೆ ಉದ್ಯೋಗವಿಲ್ಲ. ರಾಜಕೀಯವಾಗಿ ನಿರುದ್ಯೋಗಿಗಳು ಅವರು' ಎಂದು ಟೀಕಿಸಿದರು.</p><p>'ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯೇ ಸಾಕ್ಷಿ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಸಿದ್ದರಾಮಯ್ಯ ಅವರೇ ಈ ಹೇಳಿಕೆ ಕೊಡಿಸಿದ್ದಾರೆ. ಈ ಮೂಲಕ ಪಕ್ಷದ ಹೈಕಮಾಂಡ್ ಅವರು ಸವಾಲು ಹಾಕುತ್ತಿದ್ದಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: 'ರಾಷ್ಟ್ರಪತಿ, ಪ್ರಧಾನಮಂತ್ರಿ ಅವರ ಕುರಿತು ಏಕವಚನದಲ್ಲಿ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕ ಜೀವನದ ಘನತೆ ಕಾಪಾಡಿಕೊಳ್ಳಬೇಕಿದೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸೋನಿಯಾಗಾಂಧಿ ಕುರಿತು ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಲಿ ನೋಡೋಣ. ಆನಂತರ, ಅವರು ಮುಖ್ಯಮಂತ್ರಿ ಸ್ಥಾನದಲ್ಲೇ ಇರುವುದಿಲ್ಲ' ಎಂದರು.</p><p>'ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆಯೂ ಸಿದ್ದರಾಮಯ್ಯ ಕೀಳಾಗಿ ಮಾತನಾಡಿದ್ದಾರೆ. ಅದಕ್ಕಿಂತ ಕೆಟ್ಟದಾಗಿ ಟೀಕೆ ಮಾಡಲು ನಮಗೂ ಬರುತ್ತೆ. ಆದರೆ, ಅಂತಹ ಸಂಸ್ಕೃತಿ ನಮ್ಮದಲ್ಲ. ಕೈಲಾಗದವರು ಮೈ ಪರಚಿಕೊಂಡಂತೆ, ಕುಣಿಯಲಾಗದವರು ನೆಲ ಡೊಂಕು ಎನ್ನುವ ಪರಿಸ್ಥಿತಿ ಸಿದ್ದರಾಮಯ್ಯ ಅವರದ್ದು' ಎಂದು ಹೇಳಿದರು.</p><p>'ದೇಶದಲ್ಲಿ ಉದ್ಯೋಗ ಸೃಷ್ಟಿ ಆಗುತ್ತಿದ್ದರೂ, ರಾಜ್ಯಕ್ಕೆ ಸಮರ್ಪಕವಾಗಿ ತೆರಿಗೆ ಪಾಲು ನೀಡಿದರೂ ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ. ನಿಜವಾಗಿ ಅವರಿಗೆ ಉದ್ಯೋಗವಿಲ್ಲ. ರಾಜಕೀಯವಾಗಿ ನಿರುದ್ಯೋಗಿಗಳು ಅವರು' ಎಂದು ಟೀಕಿಸಿದರು.</p><p>'ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯೇ ಸಾಕ್ಷಿ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಸಿದ್ದರಾಮಯ್ಯ ಅವರೇ ಈ ಹೇಳಿಕೆ ಕೊಡಿಸಿದ್ದಾರೆ. ಈ ಮೂಲಕ ಪಕ್ಷದ ಹೈಕಮಾಂಡ್ ಅವರು ಸವಾಲು ಹಾಕುತ್ತಿದ್ದಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>