ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನ ಬೈರತಿ ಸುರೇಶ್‌ಗೆ ಕೇಸರಿ ಶಾಲು ಹಾಕಿದ ಬಿಜೆಪಿ ಶಾಸಕರು

Last Updated 18 ಜುಲೈ 2022, 15:32 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಲು ಬಂದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಅವರಿಗೆ ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿ ಸ್ವಾಗತಿಸಿದ ಘಟನೆ ಸೋಮವಾರ ವಿಧಾನಸೌಧದಲ್ಲಿ ನಡೆಯಿತು.

ಸುರೇಶ್ ಅವರು ಮತಗಟ್ಟೆಯತ್ತ ತೆರಳುತ್ತಿದ್ದರು. ಆಗ ಮತದಾನ ಮಾಡಿ ವಾಪಸ್ ಬರುತ್ತಿದ್ದ ಬಿಜೆಪಿ ಶಾಸಕರಾದ ರಾಜೂಗೌಡ, ಗೂಳಿಹಟ್ಟಿ ಶೇಖರ್, ಎಂ.ಪಿ. ರೇಣುಕಾಚಾರ್ಯ ಮುಖಾಮುಖಿಯಾದರು.

ತಮ್ಮ ಹೆಗಲ‌ ಮೇಲಿದ್ದ ಕೇಸರಿ ಶಾಲನ್ನು ತೆಗೆದ ರಾಜೂಗೌಡ ಅವರು ಬೈರತಿ ಸುರೇಶ್ ಅವರ ಹೆಗಲಿಗೆ ಹಾಕಿದರು. ತಕ್ಷಣ ಅದನ್ನು ತೆಗೆದ ಸುರೇಶ್ ವಾಪಸ್ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT