‘ಕರ್ನಾಟಕದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನಮಗೆ ಹೆಚ್ಚು ಸ್ಥಾನಗಳು ಲಭಿಸಿದ್ದವು. ಆದರೆ ಕಾಂಗ್ರೆಸ್– ಜೆಡಿಎಸ್ ಒಟ್ಟಾಗಿ, ಸರ್ಕಾರ ರಚಿಸುವುದರಿಂದ ನಮ್ಮನ್ನು ತಡೆದವು. ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಮಾನವೇ ಅಂತಿಮ ಎಂಬುದನ್ನು ಉಪಚುನಾವಣೆಗಳ ಫಲಿತಾಂಶ ಸ್ಪಷ್ಟಪಡಿಸಿದೆ’ ಎಂದು ಚುನಾವಣಾ ರ್ಯಾಲಿಯಲ್ಲಿ ಅವರು ಮಾತನಾಡಿದರು.