ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಬಾಗಲಕೋಟೆಯತ್ತ ನಿರ್ಗಮನ

Published 29 ಏಪ್ರಿಲ್ 2024, 5:46 IST
Last Updated 29 ಏಪ್ರಿಲ್ 2024, 5:46 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಬಳ್ಳಾರಿ ಸಹಿತ ಮೂರು ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಭಾನುವಾರ ಸಂಜೆ ಇಲ್ಲಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಿಗ್ಗೆ ಬಾಗಲಕೋಟೆಯತ್ತ ತೆರಳಿದರು.

ಇಲ್ಲಿನ ರೈಲು ನಿಲ್ದಾಣ ರಸ್ತೆಯ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ತಂಗಿದ್ದ ಮೋದಿ ಅವರು ಬೆಳಿಗ್ಗೆ 11.05ರ ವೇಳೆಗೆ ಹೋಟೆಲ್‌ನಿಂದ ಸಮೀಪದ ಹೆಲಿಪ್ಯಾಡ್‌ನತ್ತ ತೆರಳಿದರು.

ಭಟ್ರಹಳ್ಳಿ ಆಂಜನೇಯ ದೇವಸ್ಥಾನ ಬಳಿಯಲ್ಲಿನ ಹೆಲಿಪ್ಯಾಡ್‌ನಲ್ಲಿ ಮೂರು ಹೆಲಿಕಾಪ್ಟರ್‌ಗಳು ತಂಗಿದ್ದವು. ಪ್ರಧಾನಿ ಅವರು ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಾಗಲಕೋಟೆಯತ್ತ ತೆರಳಿದರು.

ಭಾನುವಾರ ರಾಜ್ಯದ ಮೂರು ಕಡೆ ಪ್ರಚಾರ ಭಾಷಣ ಮುಗಿಸಿಕೊಂಡು ಸಂಜೆ 5.50ಕ್ಕೆ ಹೊಸಪೇಟೆಗೆ ಬಂದಿದ್ದ ಮೋದಿ, ಇಲ್ಲಿನ ಪುನೀತ್ ರಾಜ್‍ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT