ಶಿವಮೊಗ್ಗ: ‘ನನ್ನ ಹುಟ್ಟು ಹಬ್ಬದ ದಿನವೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವುದು ಜೀವನದಲ್ಲಿಯೇ ಮರೆಯಲಾಗದ ಕ್ಷಣ. ನನಗೆ ಸಮಾಧಾನ, ತೃಪ್ತಿ ತಂದಿದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಭಾನುವಾರ ಇಲ್ಲಿ ಸುದ್ದಿಗಾರರ ಎದುರು ಭಾವುಕರಾದರು.