<p><strong>ಮೈಸೂರು: </strong>ಭ್ರಷ್ಟಾಚಾರ ಆರೋಪಗಳು, ಬೆಲೆ ಏರಿಕೆ ಕುರಿತು ತಾಕತ್ತಿದ್ದರೆ, ಧಮ್ ಇದ್ದರೆ ಬಿಜೆಪಿ ಅವರು ಒಂದೇ ವೇದಿಕೆಯಲ್ಲಿ ಚರ್ಚೆಗೆ ಬರಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲೆಸೆದರು.</p>.<p>ಸ್ವತಂತ್ರ ಭಾರತದಲ್ಲಿ ಬಿಜೆಪಿಯಂತಹ ಭ್ರಷ್ಟ ಸರ್ಕಾರ ಬಂದಿರಲಿಲ್ಲ. ಜನಸಾಮಾನ್ಯರ ಬದುಕು ಅಸಹನೀಯವಾಗಿದೆ. ಸರ್ಕಾರ ವೈಫಲ್ಯ ಮುಚ್ಚಿಕೊಳ್ಳಲು ಕೋಮುವಾದವನ್ನು ಮುನ್ನೆಲೆಗೆ ತರುವ, ಶಾಂತಿ ಕದಡುವ, ಹಿಂದೂ ಮುಸ್ಲಿಮರು ಕ್ರೈಸ್ತರ ನಡುವೆ ದ್ವೇಷ ಹಚ್ಚಿ ಸಮಾಜ ಒಡೆಯುತ್ತಿದೆ ಎಂದು ಆರೋಪಿಸಿದರು.</p>.<p>ಕೆ.ಎಸ್.ಈಶ್ವರಪ್ಪ ಅವರನ್ನು ಏಕೆ ಬಂಧಿಸಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಕೇಳುತ್ತಾರೆ. ಅವರನ್ನು ಬಂಧಿಸದೇ ಕುಮಾರಸ್ವಾಮಿ ಅವರವ್ವೇ ಬಂಧಿಸಬೇಕಾ?ಎಂದು ಪ್ರಶ್ನಿಸಿದರು.</p>.<p><a href="https://www.prajavani.net/district/gadaga/meer-sadik-siddaramaiah-responds-bjp-tweet-929789.html" itemprop="url">ಆರ್ಎಸ್ಎಸ್, ಬಿಜೆಪಿಗರಿಂದ ಮೀರ್ ಸಾದಿಕ್ ಕೆಲಸ: ಸಿದ್ದರಾಮಯ್ಯ </a></p>.<p>ತಮ್ಮ ಭಾಷಣದುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು ಭ್ರಷ್ಟಾಚಾರಕ್ಕೆ ಶಿಫಾರಸು ಮಾಡುವ ಪ್ರಧಾನಿ ಮೋದಿ ಎಂದು ವಾಗ್ದಾಳಿ ನಡೆಸಿದರು.</p>.<p>ದೇಶ ಮತ್ತು ರಾಜ್ಯ ಉಳಿಸಲು ಸರ್ಕಾರವನ್ನು ಕಿತ್ತೊಗೆಯುವ ಸಂಕಲ್ಪ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.</p>.<p>ಮಹಾತ್ಮಗಾಂಧಿ ಚೌಕದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಕಾಲ್ನಡಿಗೆಯಲ್ಲಿಯೆ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾದರು.</p>.<p><a href="https://www.prajavani.net/district/chamarajanagara/siddaramaiah-attack-state-and-central-govt-over-corruption-929786.html" itemprop="url">ಧಮ್ ಇದ್ದರೆ ‘40% ಕಮಿಷನ್‘ ತನಿಖೆ ಮಾಡಲಿ: ಮೋದಿಗೆ ಸಿದ್ದರಾಮಯ್ಯ ಸವಾಲು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಭ್ರಷ್ಟಾಚಾರ ಆರೋಪಗಳು, ಬೆಲೆ ಏರಿಕೆ ಕುರಿತು ತಾಕತ್ತಿದ್ದರೆ, ಧಮ್ ಇದ್ದರೆ ಬಿಜೆಪಿ ಅವರು ಒಂದೇ ವೇದಿಕೆಯಲ್ಲಿ ಚರ್ಚೆಗೆ ಬರಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲೆಸೆದರು.</p>.<p>ಸ್ವತಂತ್ರ ಭಾರತದಲ್ಲಿ ಬಿಜೆಪಿಯಂತಹ ಭ್ರಷ್ಟ ಸರ್ಕಾರ ಬಂದಿರಲಿಲ್ಲ. ಜನಸಾಮಾನ್ಯರ ಬದುಕು ಅಸಹನೀಯವಾಗಿದೆ. ಸರ್ಕಾರ ವೈಫಲ್ಯ ಮುಚ್ಚಿಕೊಳ್ಳಲು ಕೋಮುವಾದವನ್ನು ಮುನ್ನೆಲೆಗೆ ತರುವ, ಶಾಂತಿ ಕದಡುವ, ಹಿಂದೂ ಮುಸ್ಲಿಮರು ಕ್ರೈಸ್ತರ ನಡುವೆ ದ್ವೇಷ ಹಚ್ಚಿ ಸಮಾಜ ಒಡೆಯುತ್ತಿದೆ ಎಂದು ಆರೋಪಿಸಿದರು.</p>.<p>ಕೆ.ಎಸ್.ಈಶ್ವರಪ್ಪ ಅವರನ್ನು ಏಕೆ ಬಂಧಿಸಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಕೇಳುತ್ತಾರೆ. ಅವರನ್ನು ಬಂಧಿಸದೇ ಕುಮಾರಸ್ವಾಮಿ ಅವರವ್ವೇ ಬಂಧಿಸಬೇಕಾ?ಎಂದು ಪ್ರಶ್ನಿಸಿದರು.</p>.<p><a href="https://www.prajavani.net/district/gadaga/meer-sadik-siddaramaiah-responds-bjp-tweet-929789.html" itemprop="url">ಆರ್ಎಸ್ಎಸ್, ಬಿಜೆಪಿಗರಿಂದ ಮೀರ್ ಸಾದಿಕ್ ಕೆಲಸ: ಸಿದ್ದರಾಮಯ್ಯ </a></p>.<p>ತಮ್ಮ ಭಾಷಣದುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು ಭ್ರಷ್ಟಾಚಾರಕ್ಕೆ ಶಿಫಾರಸು ಮಾಡುವ ಪ್ರಧಾನಿ ಮೋದಿ ಎಂದು ವಾಗ್ದಾಳಿ ನಡೆಸಿದರು.</p>.<p>ದೇಶ ಮತ್ತು ರಾಜ್ಯ ಉಳಿಸಲು ಸರ್ಕಾರವನ್ನು ಕಿತ್ತೊಗೆಯುವ ಸಂಕಲ್ಪ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.</p>.<p>ಮಹಾತ್ಮಗಾಂಧಿ ಚೌಕದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಕಾಲ್ನಡಿಗೆಯಲ್ಲಿಯೆ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾದರು.</p>.<p><a href="https://www.prajavani.net/district/chamarajanagara/siddaramaiah-attack-state-and-central-govt-over-corruption-929786.html" itemprop="url">ಧಮ್ ಇದ್ದರೆ ‘40% ಕಮಿಷನ್‘ ತನಿಖೆ ಮಾಡಲಿ: ಮೋದಿಗೆ ಸಿದ್ದರಾಮಯ್ಯ ಸವಾಲು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>