<p><strong>ಬೆಂಗಳೂರು: </strong>‘ಸಮಗ್ರ ಪ್ರದೇಶ ಯೋಜನೆ’ (ಏರಿಯಾ ಸ್ಕೀಮ್) ಮುಖಾಂತರ ಖಾಸಗಿ ಬಸ್ಗಳ ರಾಷ್ಟ್ರೀಕರಣ ಕುರಿತ ಕರಡು ಅಧಿಸೂಚನೆಯ ಬಗ್ಗೆ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ನೇತೃತ್ವದ ವಿಚಾರಣಾ ಪ್ರಾಧಿಕಾರ ಶುಕ್ರವಾರ (ನ.24) ಬಾಧಿತರ ಅಹವಾಲು ಆಲಿಸಲಿದೆ.</p>.<p>‘ಏತನ್ಮಧ್ಯೆ ಬಾಧಿತರ ಆಕ್ಷೇಪಣೆ ಹಾಗೂ ಸಲಹೆಗಳನ್ನು ಮುಕ್ತವಾಗಿ ಪರಿಗಣಿಸಿ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣಾ ಪ್ರಾಧಿಕಾರಕ್ಕೆ ಸೂಚಿಸಿದ್ದು ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.</p>.<p>ಈ ಕುರಿತಂತೆ ಕರ್ನಾಟಕ ಬಸ್ ಮಾಲೀಕರ ಒಕ್ಕೂಟದ ಅಧ್ಯಕ್ಷ ಕೆ.ರಾಜವರ್ಮ ಬಲ್ಲಾಳ ಸೇರಿದಂತೆ ಐವರು ರಿಟ್ ಅರ್ಜಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಪೀಠ ವಿಚಾರಣೆಗೆ ಅಂಗೀಕರಿಸಿದೆ.</p>.<p class="Subhead">ಅರ್ಜಿದಾರರ ಕೋರಿಕೆ: ‘ಸರ್ಕಾರದ ಕ್ರಮ ಖಾಸಗಿ ಬಸ್ ಸಂಚಾರ ನಿರ್ಮೂಲನೆ ಮಾಡುವ ಉದ್ದೇಶದಿಂದ ಕೂಡಿದೆ. 2018ರ ಮಾರ್ಚ್ 24ರಂದು ಅಧಿಸೂಚನೆ ಹೊರಡಿಸಿರುವ ಅಧಿಸೂಚನೆ ನ್ಯೂನ್ಯತೆಗಳಿಂದ ಕೂಡಿದೆ. ವಿಚಾರಣಾ ಪ್ರಾಧಿಕಾರವು ಸಾರಿಗೆ ಸಚಿವರ ನೇತೃತ್ವದಲ್ಲಿ ಇರಬೇಕು. ಆದರೆ, ಈ ಪ್ರಕರಣದಲ್ಲಿ ಸಹಕಾರ ಸಚಿವರು ವಿಚಾರಣಾ ಪ್ರಾಧಿಕಾರದ ಮುಖ್ಯಸ್ಥರಾಗಿದ್ದಾರೆ’ ಎಂಬುದು ಅರ್ಜಿದಾರರ ಆಕ್ಷೇಪ.</p>.<p>ಅರ್ಜಿದಾರರ ಪರ ಹಿರಿಯ ವಕೀಲ ಎಸ್.ವಿಜಯಶಂಕರ್ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸಮಗ್ರ ಪ್ರದೇಶ ಯೋಜನೆ’ (ಏರಿಯಾ ಸ್ಕೀಮ್) ಮುಖಾಂತರ ಖಾಸಗಿ ಬಸ್ಗಳ ರಾಷ್ಟ್ರೀಕರಣ ಕುರಿತ ಕರಡು ಅಧಿಸೂಚನೆಯ ಬಗ್ಗೆ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ನೇತೃತ್ವದ ವಿಚಾರಣಾ ಪ್ರಾಧಿಕಾರ ಶುಕ್ರವಾರ (ನ.24) ಬಾಧಿತರ ಅಹವಾಲು ಆಲಿಸಲಿದೆ.</p>.<p>‘ಏತನ್ಮಧ್ಯೆ ಬಾಧಿತರ ಆಕ್ಷೇಪಣೆ ಹಾಗೂ ಸಲಹೆಗಳನ್ನು ಮುಕ್ತವಾಗಿ ಪರಿಗಣಿಸಿ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣಾ ಪ್ರಾಧಿಕಾರಕ್ಕೆ ಸೂಚಿಸಿದ್ದು ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.</p>.<p>ಈ ಕುರಿತಂತೆ ಕರ್ನಾಟಕ ಬಸ್ ಮಾಲೀಕರ ಒಕ್ಕೂಟದ ಅಧ್ಯಕ್ಷ ಕೆ.ರಾಜವರ್ಮ ಬಲ್ಲಾಳ ಸೇರಿದಂತೆ ಐವರು ರಿಟ್ ಅರ್ಜಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಪೀಠ ವಿಚಾರಣೆಗೆ ಅಂಗೀಕರಿಸಿದೆ.</p>.<p class="Subhead">ಅರ್ಜಿದಾರರ ಕೋರಿಕೆ: ‘ಸರ್ಕಾರದ ಕ್ರಮ ಖಾಸಗಿ ಬಸ್ ಸಂಚಾರ ನಿರ್ಮೂಲನೆ ಮಾಡುವ ಉದ್ದೇಶದಿಂದ ಕೂಡಿದೆ. 2018ರ ಮಾರ್ಚ್ 24ರಂದು ಅಧಿಸೂಚನೆ ಹೊರಡಿಸಿರುವ ಅಧಿಸೂಚನೆ ನ್ಯೂನ್ಯತೆಗಳಿಂದ ಕೂಡಿದೆ. ವಿಚಾರಣಾ ಪ್ರಾಧಿಕಾರವು ಸಾರಿಗೆ ಸಚಿವರ ನೇತೃತ್ವದಲ್ಲಿ ಇರಬೇಕು. ಆದರೆ, ಈ ಪ್ರಕರಣದಲ್ಲಿ ಸಹಕಾರ ಸಚಿವರು ವಿಚಾರಣಾ ಪ್ರಾಧಿಕಾರದ ಮುಖ್ಯಸ್ಥರಾಗಿದ್ದಾರೆ’ ಎಂಬುದು ಅರ್ಜಿದಾರರ ಆಕ್ಷೇಪ.</p>.<p>ಅರ್ಜಿದಾರರ ಪರ ಹಿರಿಯ ವಕೀಲ ಎಸ್.ವಿಜಯಶಂಕರ್ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>