ಬೆಂಗಳೂರು: ಖಾಸಗಿ ಅನುದಾನರಹಿತ ಶಾಲೆಗಳ ಮಾನ್ಯತೆ ನವೀಕರಿಸಲು ಹಿಂದೇಟು ಹಾಕುತ್ತಿರುವ ಸರ್ಕಾರ, ಶಿಕ್ಷಕರಿಗೆ ₹21,400 ವೇತನ ನೀಡಬೇಕು ಎಂದು ಆದೇಶಿಸುವ ಮೂಲಕ ಖಾಸಗಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿರುವ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸ),ಡಿ.2ರಂದು ಧಾರವಾಡ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.